Skip to main content

Posts

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

Recent posts

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಎಸ್. ವೈ. ಎಸ್ ಉಪ್ಪಿನಂಗಡಿ ಝೋನ್ ವತಿಯಿಂದ ಜಮಾಅತ್ ಪ್ರತಿನಿಧಿ ಸಂಗಮ.ಮದುವೆಯ ದುಂದುವೆಚ್ಚದಿಂದ ದೂರವಿರಿ - ಯಾಕೂಬ್ ಸಅದಿ ನಾವೂರು.

ರಾಜ್ಯದ ಅತೀ ದೊಡ್ಡ ಸುನ್ನೀ ಯುವಜನ ಸಂಘಟನೆಯಾದ  ಎಸ್ ವೈ ಎಸ್ ಇದರ ಉಪ್ಪಿನಂಗಡಿ ಝೋನ್ ಸಮಿತಿ ವತಿಯಿಂದ ಖುತುಬಾ ಹಾಗೂ ಜಮಾಅತ್ ಪ್ರತಿನಿಧಿ ಸಂಗಮವು ಎಸ್ ವೈ ಎಸ್ ಝೋನ್ ಸಮಿತಿ ಅಧ್ಯಕ್ಷರಾದ ಅಬ್ದುರ್ರಝಾಖ್ ಲತೀಫಿ ಕುಂತೂರು ಇವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯ ಎಸ್ ಜೆ ಎಂ ಜಿಲ್ಲಾ ಮುಅಲ್ಲಿಂ ಸೆಂಟರ್  ಸಭಾಂಗಣದಲ್ಲಿ ಜರುಗಿತು. ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ನಾವೂರು ರವರು ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದಲ್ಲಿಂದು ಮದುವೆಯ ಹೆಸರಲ್ಲಿ ಅನಗತ್ಯವಾಗಿ ನಡೆಯುತ್ತಿರುವ ದುಂದು ವೆಚ್ಚ ಹಾಗೂ ಅನಾಚಾರದಿಂದ  ದೂರವಿರುವಂತೆ ನಮ್ಮ ಯುವಕ ಯುವತಿಯರಿಗೆ ಜಮಾಅತ್  ನಾಯಕರು ಸ್ಪಷ್ಟ ಸಂದೇಶ ನೀಡಿ, ಸರಳ ಮಾದರಿ ಮದುವೆಗೆ ಪ್ರೇರಣೆ ನೀಡಬೇಕೆಂದು ಕರೆ ನೀಡಿದರು. ಕೆ.ಎಂ.ಜೆ ಜಿಲ್ಲಾಧ್ಯಕ್ಷರಾದ ಜಿ ಮುಹಮ್ಮದ್ ಕಾಮಿಲ್ ಸಖಾಫಿ ಯವರು ಕಾರ್ಯಕ್ರಮ ಉದ್ಘಾಟಿಸಿದರು. ಜಂ-ಇಯ್ಯತುಲ್ ಉಲಮಾ ಕೇಂದ್ರ ಸಮಿತಿ ನಾಯಕರಾದ ಆದಂ ಅಹ್ಸನಿ ಉಸ್ತಾದರು ದುಆ ನೆರವೇರಿಸಿದರು. ಪ್ರಸ್ತುತ ಸಭೆಯಲ್ಲಿ ಉಮರುಲ್ ಫಾರೂಕ್ ಸಖಾಫಿ ನೆಕ್ಕಿಲು, ಅತಾವುಲ್ಲ ಹಿಮಮಿ ಸಖಾಫಿ, ಹಮೀದ್ ಸಅದಿ ಕಳಂಜಿಬೈಲು, ಕಾಸಿಂ ಪದ್ಮುಂಜ, ಅಬ್ಬಾಸ್ ಬಟ್ಲಡ್ಕ, ಉಸ್ಮಾನ್ ಸೋಕಿಲ, ಅಬ್ದುಲ್ ಮಜೀದ್ ಸಖಾಫಿ, ಡಿ ಹೆಚ್ ಇಬ್ರಾಹಿಂ ಸಅದಿ, ಮುಹಮ್ಮದ್ ಅಲೀ ತುರ್ಕಳಿಕೆ, ಇಸ್ಹಾಕ್ ಹಾಜಿ ಮೇದರಬೆಟ್ಟು, ಅಬ್ದುಲ್ ಶುಕೂರ...

ಇಂದು ಕೊಳಕೆಯಲ್ಲಿ ಅಸ್ಸಯ್ಯಿದ್ ಚಟ್ಟೆಕ್ಕಲ್ ತಂಙಳ್ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ

ದೀವಾನ್ -ಇ-ಖಾಝಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸಯ್ಯಿದ್ ಮುಶ್ತಾಖುರ್ರಹ್ಮಾನ್ ಅಲ್ ಬುಖಾರಿ ಚಟ್ಟೆಕ್ಕಲ್ ತಂಙಳ್ ರವರಿಗೆ ಬಂಟ್ವಾಳ ತಾಲೂಕು ಸುನ್ನೀ ಸಂಘಟನೆಗಳ ಒಕ್ಕೂಟದ ವತಿಯಿಂದ ಡಿಸೆಂಬರ್ 05 ಶುಕ್ರವಾರ ಇಂದು ಸಂಜೆ 4 ಗಂಟೆಗೆ ಕೊಳಕೆ ಮಸ್ಜಿದ್ ವಠಾರ ತಾಜುಲ್ ಉಲಮಾ ವೇದಿಕೆಯಲ್ಲಿ ಗೌರವಾರ್ಪಣೆ ನಡೆಯಲಿದೆ. ಮದ್ಯಾಹ್ನ 3 ಗಂಟೆಗೆ ಅಮ್ಮೆಂಬಳ, ಜಾರದಗುಡ್ಡೆ ದರ್ಗಾ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಸಾದಾತ್ ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಚಯರ್ಮೆನ್ ಆಶ್ರಫ್ ಸಖಾಫಿ ಆಲಡ್ಕ ಕರೆ ನೀಡಿದ್ದಾರೆ

SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್.ವಿ ಎ ಮುಹಮ್ಮದ್ ಸಖಾಫಿ ಕ್ವಿಝ್ ಸ್ಪರ್ಧೆಯಲ್ಲಿ ಪ್ರಥಮ.ಮಾದರೀಯೋಗ್ಯ ತರಗತಿ ನಡೆಸಿದ ಝೈನುದ್ದೀನ್ ಮದನಿ

ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್ ಉಳ್ಳಾಲ ಮುಕ್ಕಚೇರಿಯ ಅಲ್ ಮುಬಾರಕ್ ಮದ್ರಸ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಅಧ್ಯಕ್ಷತೆ ವಹಿಸಿದರು. ಮುಕ್ಕಚೇರಿ ಮದ್ರಸದ ಮುಖ್ಯೋಪಾಧ್ಯಾಯರಾದ ವಿ ಕೆ ಅಬ್ದುರ್ರಹ್ಮಾನ್ ಸಖಾಫಿ ದುಆ ನೆರವೇರಿಸಿದರು. ದಾರಂದಬಾಗಿಲು ಜುಮಾ ಮಸ್ಜಿದ್ ಖತೀಬರಾದ ಜಾಬಿರ್ ಫಾಳಿಲಿ ಖಿರಾಅತ್ ಪಠಿಸಿ, ಸಭೆಗೆ ಚಾಲನೆ ನೀಡಿದರು. ಮುಕ್ಕಚೇರಿ ಜುಮಾ ಮಸ್ಜಿದ್ ಖತೀಬರಾದ ಶರೀಫ್ ಬಾಖವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರೇಂಜ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ವರದಿ ಮಂಡಿಸಿದರು. ಕೋಶಾಧಿಕಾರಿ ವಿ ಎ ಮುಹಮ್ಮದ್ ಸಖಾಫಿ ಲೆಕ್ಕಪತ್ರ ಮಂಡಿಸಿದರು. ಮುಕ್ಕಚೇರಿ ಮಸೀದಿ, ಮದ್ರಸದ ಆಡಳಿತ ಸಮಿತಿಯ ಅಧ್ಯಕ್ಷರಾದ ಜಮಾಲಿಯ ಅಬ್ದುಲ್ ಖಾದರ್ ರವರ ಪುತ್ರ, ಸಮಿತಿ ಸದಸ್ಯರಾದ ಖಲೀಲ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಭೆಯ ಪ್ರಾರಂಭಕ್ಕೂ ಮುನ್ನ ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಮುಅಲ್ಲಿಂ ಝೈನುದ್ದೀನ್ ಮದನಿ ವಿದ್ಯಾರ್ಥಿಗಳಿಗೆ ಮಾದರೀ ಯೋಗ್ಯವಾದ ತರಗತಿ ನಡೆಸಿದರು. ತರಗತಿಯಲ್ಲಿ ಹಾಜರಿದ್ದ ಮುಅಲ್ಲಿಮರಿಂದ ವ್ಯಾಪಕ ಪ್ರಶಂಶೆಗೆ ಝೈನುದ್ದೀನ್ ಮದನಿ ಯವರ ತರಗತಿ ಪಾತ್ರವಾಯಿತು. ಅಳೇಕಲ ಮದ್ರಸದ ಮತ್ತೋರ್ವ ಮುಅಲ್ಲಿಮರಾದ ನಿಝಾಂ ಅಮಾನಿ ...

ಮಹಾ ಮಳೆ : 68 ಆಡು, ಕುರಿಗಳ ಸಾವು

ಉಳ್ಳಾಲ : ನಿನ್ನೆ ರಾತ್ರಿ ಸುರಿದ ಮಹಾಮಳೆಯಿಂದ ತಲಪಾಡಿ ಸಮೀಪದ ಕೆಸಿ ರೋಡ್ ಮಟನ್ ಯಾಕೂಬ್ ರವರ 68 ಆಡು, ಕುರಿಗಳು ಸಾವಿಗೀಡಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಆಡಿನ ಶೆಡ್ಡಿನೊಳಗೆ ನಿರಂತರ ಸುರಿದ ಮಳೆಯಿಂದ ನೆರೆ ನೀರು ನುಗ್ಗಿದ್ದು, ಆಡು, ಕುರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. 23 ಆಡು, ಕುರಿಗಳು ಪತ್ತೆಯಾಗಿದ್ದು, ಹೊಂಡ ತೆಗೆದು ಹೂಳಲಾಗಿದೆ.