Skip to main content

ವಾಟ್ಸಪ್ ಮೂಲಕ ಉಜಿರೆಬೆಟ್ಟು ಯುವಕರ ವಿಶಿಷ್ಟ ಸಾಧನೆ

*ಸಾಮಾಜಿಕ ತಾಣಗಳ ಮೂಲಕ ಜಮಾಅತಿನ ಸೇವೆಗೆ ಮುಂದಾದ ಯುವಕರು..!*
*ವಾಟ್ಸ್ ಅಪ್ ಗ್ರೂಪ್ ಮೂಲಕ ಉಜಿರೆಬೆಟ್ಟು ಯುವಕರ ವಿಶಿಷ್ಟ ಸಾಧನೆ..!!*

ಸಾಮಾಜಿಕ ತಾಣಗಳು ಅನಾಚಾರ, ಅಧರ್ಮಗಳಿಗೋಸ್ಕರ ಮೀಸಲಾಗುತ್ತಿರುವ ಪ್ರಸಕ್ತವಾದ ಸನ್ನಿವೇಶದಲ್ಲಿ, ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಗ್ರೂಪ್  ಮುಖಾಂತರ ತಮ್ಮ ಜಮಾಅತಿನ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ಕಾರ್ಯಾಚರಿಸುವ ಸಂಘಟನೆಯೇ ಎಂ.ಜೆ.ಎಂ ಉಜಿರಬೆಟ್ಟು..!!

ಬಹುತೇಕ ಬಡತನದ ಕುಟುಂಬಗಳನ್ನೇ ಹೊಂದಿರುವ ಜಮಾಅತಿನ ಮದ್ರಸದಲ್ಲಿನ ಉಸ್ತಾದರಿಗೆ ತಿಂಗಳ ಸಂಬಳ ನೀಡಿ ಸಹಕರಿಸುವ ಸಲುವಾಗಿ ಒಂಭತ್ತು ತಿಂಗಳ ಹಿಂದೆ ಜನ್ಮತಾಳಿದ ಸಂಘಟನೆಯಿಂದು ಸರ್ವಶಕ್ತನ ಅನುಗ್ರಹ, ಸಹೃದಯಿಗಳ ನೆರವಿನಿಂದ ಈಗಾಗಲೇ ಒಬ್ಬರು ಉಸ್ತಾದರ ಸಂಬಳವನ್ನು ನೀಡುತ್ತಾ ಮುಂದುವರಿಯುತ್ತಿದೆ.

ಜಮಾಅತ್ ವ್ಯಾಪ್ತಿಯೊಳಗಿನ ಬಡತನದ ಬೇಗುದಿಯಲ್ಲಿ ಕಳೆಯುತ್ತಿರುವ ಸಹೋದರಿಯರ ಮದುವೆಗೆ ಸಹಾಯ, ಚಿಕಿತ್ಸೆಗೆ ಹಣವಿಲ್ಲದೆ ಕಷ್ಟಪಡುವ ರೋಗಿಗಳಿಗೆ ಸಹಾಯಹಸ್ತ, ಬಡವರ ಶಿಕ್ಷಣಕ್ಕೆ ಒತ್ತು ಮುಂತಾದ ಜೀವಕಾರುಣ್ಯ ಪದ್ಧತಿಗಳ ದೀರ್ಘದೃಷ್ಟಿಯ ಯೋಜನೆಯೊಂದಿಗೆ ಕಾರ್ಯಾಚರಿಸುತ್ತಿರುವ ಸಂಘಟನೆಯು ಮುಂದಿನ ಎಪ್ರಿಲ್ ತಿಂಗಳ ನಂತರ ಇನ್ನೊಂದು ಉಸ್ತಾದರ ಸಂಬಳವನ್ನು ಸಹ ತಮ್ಮ ಸಂಘಟನೆಯ ವತಿಯಿಂದ ನೀಡಲು ತೀರ್ಮಾನಿಸಿದ್ದು,ಅದಲ್ಲದೆ ಮಸೀದಿಯ ಮಿನಾರ ನಿರ್ಮಿಸಲು ತಗಲುವ ಸರಿಸುಮಾರು ಆರು ಲಕ್ಷದಷ್ಟು ಮೊತ್ತವನ್ನು ಸಂಘಟನೆಯ ವತಿಯಿಂದ ಸಂಗ್ರಹಿಸಿ ನೀಡಲು ತೀರ್ಮಾನಿಸಲಾಗಿದೆ.

ತಮ್ಮ ಕೆಲಸದ ಒತ್ತಡದ ನಡುವೆಯೂ, ಜೀವನದ ಹಲವಾರು ಕಷ್ಟ, ಯಾತನೆಗಳ ನಡುವೆಯೂ ಊರಿನ ಅಭಿವೃದ್ಧಿಯೊಂದಿಗೆ ಕೈ ಜೋಡಿಸುವ ಉದಾತ್ತ ಗುರಿಯೊಂದಿಗೆ ಮುನ್ನಡೆಯುತ್ತಿರುವ ಪ್ರವಾಸಿ ಗೆಳೆಯ ಮಿತ್ರರ ಕನಸಿನ ಕೂಸಾದ ಎಂ.ಜೆ.ಎಂ ಉಜಿರೆಬೆಟ್ಟು ಸಂಘಟನೆ ಇನ್ನಷ್ಟು ಎತ್ತರಕ್ಕೆ ಬೆಳೆದು, ಅಸಹಾಯಕ ಮನಸ್ಸುಗಳ ಕಣ್ಣೀರನ್ನು ಒರೆಸುವಂತಾಗಲಿ,ಇನ್ನಷ್ಟು ಜೀವಕಾರುಣ್ಯ ಸೇವೆಗಳು ಸಮಾಜದ, ಸಮುದಾಯದ ನಿರ್ಗತಿಕ ಮನಸ್ಸುಗಳಿಗೆ ಫಲಪ್ರದವಾಗುವಂತಾಗಲಿ .....
ಆಮೀನ್........

ಜಮಾಅತಿನವರಾದ ನಿಮ್ಮೆಲ್ಲರ ದುಅಃ ನಿರೀಕ್ಷೆಯೊಂದಿಗೆ
(MJM ಗಲ್ಫ್ ಕಮಿಟಿ ಉಜಿರ್ಬೆಟ್ಟು)

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.