Skip to main content

ಪೆರಿಯಪಾದೆ : ರಜಬ್ ತಿಂಗಳ ಮಹತ್ವ, ಮೆಹಫಿಲೇ ತ್ವಯ್ಬಃ ದ್ಸಿಕ್ರ್ ಮಜ್ಲಿಸ್

*ಎಸ್ ಎಸ್ ಎಫ್ ಪೆರಿಯಪಾದೆ ಶಾಖಾ ವತಿಯಿಂದ ರಜಬ್ ತಿಂಗಳ ಮಹತ್ವ ,ಮೆಹಫಿಲೇ ತಯಿಬ ದ್ಸಿಕ್ರ್ ಮಜ್ಲಿಸ್ ಹಾಗೂ ಸಹಾಯಧನ ವಿತರಣೆ*

_ಎಸ್ ಎಸ್ ಎಫ್ ಪೆರಿಯಪಾದೆ ಶಾಖಾ ವತಿಯಿಂದ ರಜಬ್ ತಿಂಗಳ ಮಹತ್ವ ಮತ್ತು ಮೆಹಫಿಲೇ ತಯಿಬ ದ್ಸಿಕ್ರ್ ಮಜ್ಲಿಸ್ ಇತ್ತೀಚೆಗೆ ಪೆರಿಯಪಾದೆಯ ಅಕ್ರಂರವರ ನಿವಾಸದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾಧ್ಯಕ್ಷರಾದ ಹಾರಿಸ್ ಪೆರಿಯಪಾದೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಝಮೀರ್ ರವರು ಸ್ವಾಗತಿಸಿದರು. ಕೆ ಸಿ ಎಫ್ ಬತ್ತಾ ಸೆಕ್ಟರ್ ಅಧ್ಯಕ್ಷರಾದ ಇಲ್ಯಾಸ್ ಲತೀಫಿ ಉಸ್ತಾದ್ ದುವಾ ಹಾಗೂ ಮೆಹಫಿಲೇ ತಯಿಬ ದ್ಸಿಕ್ರ್ ಮಜ್ಲಿಸಿಗೆ ನೇತ್ರತ್ವ ನೀಡಿದರು. ಎಸ್ ಎಸ್ ಎಫ್ ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ರಶೀದ್ ವಗ್ಗ ರಜಬ್ ತಿಂಗಳ ಮಹತ್ವ ಎಂಬ ವಿಷಯದಲ್ಲಿ  ತರಗತಿ ನಡೆಸಿದರು. ಯುದ್ಧ ಹರಾಮಾದ ನಾಲ್ಕು ತಿಂಗಳಿನಲ್ಲಿ ರಜಬ್ ಕೂಡಾ ಒಂದಾಗಿದ್ದು ಮುಸ್ಲಿಮನ ಮೂಲಭೂತ ಕರ್ಮಗಳಲ್ಲೊಂದಾದ ನಮಾಝ್ ಕಡ್ಡಾಯಗೊಳಿಸಿದ ತಿಂಗಳು ಇದಾಗಿದೆ.ಪ್ರತ್ಯೇಕವಾಗಿ ರಜಬ್ ತಿಂಗಳ 27 ರ ಉಪವಾಸಕ್ಕೆ ವಿಶೇಷ ಸುನ್ನತ್ತಿದ್ದು ಕಾರ್ಯಕರ್ತರೆಲ್ಲರೂ ವ್ರತಾನುಷ್ಠಾನ ಮಾಡಿ ಅಲ್ಲಾಹನ ಪ್ರೀತಿ ಪಾತ್ರಕ್ಕೆ ಒಳಗಾಗಬೇಕೆಂದು ಕರೆ ನೀಡಿದರು. ಕೆ.ಸಿ.ಎಫ್ ಬತ್ತಾ ಸೆಕ್ಟರ್ ಅಧ್ಯಕ್ಷರಾದ ಇಲ್ಯಾಸ್ ಲತೀಫಿ ಉಸ್ತಾದರು ಕೆ.ಸಿ.ಎಫ್ ಸಂಘಟನೆಯ ಬಗ್ಗೆ ವಿವರಿಸಿದರು. ಕೆ.ಸಿ ಎಫ್. ಬಡಜನರ ಪಾಲಿಗೆ ಆಶಾಕಿರಣವಾಗಿದೆ. ಹಿಂದಿನ ಕಾಲದಲ್ಲಿ ನೂತನವಾದಿಗಳ ಪೊಳ್ಳು ವಾದಕ್ಕೆ ಬಲಿಯಾಗುತ್ತಿದ್ದ ಪ್ರವಾಸಿ ಕನ್ನಡಿಗರಿಗೆ ಸುನ್ನತ್ ಜಮಾಅತಿನ ಆಶಯ ಆದರ್ಶಗಳನ್ನು ಮೈಗೂಡಿಸಿ ಜೀವಿಸಲು ಕೆ ಸಿ ಎಫ್ ಸಹಕಾರಿಯಾಗಿದೆ.ಪ್ರತೀ ವಾರದಲ್ಲೂ ಧಾರ್ಮಿಕ ತರಗತಿ ಅಸ್ಸುಫಾ ತರಗತಿ, ಸ್ವಲಾತ್ ಮಜ್ಲಿಸ್ ಹೀಗೆ ಹಲವಾರು ಕಾರ್ಯಕ್ರಮಗಳು ನಡೆಸುವಲ್ಲಿ ಯಶಸ್ವಿಯಾಗಿದೆ. ಕೆ ಸಿ ಎಫ್ ನನ್ನ ಸಂಘಟನೆ ಎಂದು ಬೇಕಲ್ ಉಸ್ತಾದ್ ಹೇಳಿದ್ದನ್ನು ಅಭಿಮಾನದಿಂದಲೇ ಸ್ಮರಿಸಿದರು. ಇದೇ ಸಂಧರ್ಭದಲ್ಲಿ ಅನಾರೋಗ್ಯದಿಂದಿರುವ ಎಸ್ ಎಸ್ ಎಫ್ ಪೆರಿಯಪಾದೆ ಶಾಖೆಯ ಸದಸ್ಯ ಶಂಸೀರ್ ಗಣಪಳಿಕೆ ಇವರಿಗೆ ಕೆ.ಸಿ.ಎಫ್ ಬತ್ತಾ ಸೆಕ್ಟರಿನ *ವಿ ಕೇರ್*ವತಿಯಿಂದ *25000 ರೂಪಾಯಿ ಸಹಾಯಧನ* ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ, ಎಸ್ ವೈ ಎಸ್ ಪಾಣೆಮಂಗಳೂರು ಸೆಂಟರಿನ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಕೊಳಕೆ, ಬಂಟ್ವಾಳ ಡಿವಿಷನ್ ಸದಸ್ಯರಾದ ಕೆರೀಂ ಬೋಳಂತೂರು, ಬಂಟ್ವಾಳ ಸೆಕ್ಟರ್ ಅಧ್ಯಕ್ಷರಾದ ಮನ್ಸೂರ್ ವಗ್ಗ ಭಾಗವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ಏರ್ಪಡಿಸಲಾಯಿತು_

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.