ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಸಾಂತ್ವನ ವಿಭಾಗದ ಆಶ್ರಯದಲ್ಲಿ ಉಳ್ಳಾಲ ಆಸುಪಾಸಿನ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ ಜಿ ಹನೀಫ್ ಹಾಜಿಯವರ ಅಧ್ಯಕ್ಷತೆಯಲ್ಲಿ ಮಾಸ್ತಿಕಟ್ಟೆ ಆಝಾದ್ ನಗರದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕಛೇರಿಯಲ್ಲಿ ನಡೆಯಿತು.
ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಮಾಜಿ ಅಧ್ಯಕ್ಷರಾದ ಉಸ್ಮಾನ್ ಸಖಾಫಿ ಪೊಳಲಿ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಮಾತನಾಡಿ ಬಡ ನಿರ್ಗತಿಕರ, ವಿಧವೆಯರ ಅನಾಥರ ಕಣ್ಣೀರೊರೆಸುವ ಸಾಂತ್ವನ ಕಾರ್ಯಕ್ರಮಗಳು ಅಲ್ಲಾಹನ ಬಳಿ ಅಪಾರ ಪ್ರತಿಫಲ ಲಭಿಸುವ ಕಾರ್ಯಗಳಾಗಿವೆ ಅಂದರು. ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ ಅತಿಥಿಗಳನ್ನು ಸ್ವಾಗತಿಸಿ ಈ ಕಾರ್ಯಕ್ರಮವು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಪ್ರಾಥಮಿಕ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿ ಬಡ ನಿರ್ಗತಿಕರ, ಅನಾಥರ, ವಿಧವೆಯರ ಕಣ್ಣೀರೊರೆಸುವ ಸಾಂತ್ವನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಬಳಿಕ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್ ಇವರ ನೇತ್ರತ್ವದಲ್ಲಿ ರಂಝಾನ್ ಕಿಟ್ ವಿತರಣೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಸಾಂತ್ವನ ವಿಭಾಗದ ಕೋಶಾಧಿಕಾರಿ ತ್ವಾಹಿರ್ ಹಾಜಿ ಮುಕ್ಕಚ್ಚೇರಿ, ಸೆಂಟರ್ ಜೊತೆ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಸಾಂತ್ವನ ವಿಭಾಗದ ಅಕ್ಕರೆಕೆರೆ ಸಂಚಾಲಕ ಅಬ್ದುರ್ರಹ್ಮಾನ್ ಅಕ್ಕರೆಕೆರೆ, ಸಾಂತ್ವನ ವಿಭಾಗದ ಮುಕ್ಕಚ್ಚೇರಿ ಸಂಚಾಲಕ ಮುಸ್ತಫ ಮಾಸ್ಟರ್, ಸಾಂತ್ವನ ವಿಭಾಗದ ಜೊತೆ ಕಾರ್ಯದರ್ಶಿ ಅತೀಖ್ ಕೋಡಿ ಹಾಗು ಲೆಕ್ಕ ಪರಿಶೋಧಕ ಫಾರೂಖ್ ಬೊಟ್ಟು ಉಪಸ್ಥಿತರಿದ್ದರು. ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ ಧನ್ಯವಾದಗೈದರು.
Comments
Post a Comment