Skip to main content

ರಾಜೀನಾಮೆ ಪತ್ರ.

*ಪ್ರಿಯ ಮುಅಲ್ಲಿಂ,ಮುಅಝ್ಝಿನ್,ಸದರ್,ಖತೀಬ್ ಸೇವೆಯಲ್ಲಿರುವ ಮಿತ್ರರೇ,*
ಮದ್ರಸಾ ಪರೀಕ್ಷೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ  ಪರೀಕ್ಷೆ ಮುಗಿದೋ ಅಥವಾ ರಮಳಾನ್ ಮುಗಿದೋ ಈಗಿರುವ ಮೊಹಲ್ಲಾದಿಂದ  ಬಿಡಲು ಮನದೊಳಗೆ ತೀರ್ಮಾನಿಸಿ ಅದರ ಘೋಷಣೆಯ ಹೊಸ್ತಿಲಲ್ಲಿರುವಾಗ ರಾಜಿನಾಮೆಯನ್ನು ಲಿಖಿತ ಮೂಲಕ ತಿಳಿಸುವುದು ಸೇವಾ ಮರ್ಯಾದೆಯಾಗಿದೆ.ಈ ಬಗ್ಗೆ ಅದರ ಒಂದು ಮಾದರಿಯನ್ನು ಕೆಳಗೆ ಕೊಡುತ್ತಿದ್ದೇನೆ.ಅಗತ್ಯವಿರುವವರಿಗೆ ಸಹಾಯಕವಾಗಲಿ ಎಂಬ ಸದುದ್ದೇಶವಾಗಿದೆ ನನ್ನದು.
ರಾಜಿನಾಮೆ ನೀಡಲು ನಮಗೆ ಹಲವು ಕಾರಣಗಳಿರಬಹುದು.ಇರುವ ಮೊಹಲ್ಲಾದಲ್ಲಿ ಕೆಲವರೊಂದಿಗಿರುವ ಮುನಿಸೋ,ವ್ಯಕ್ತಿಗತ ದ್ವೇಷವೋ,ಫಿತ್ನಗಾರರ ಪಿತೂರಿಯ ಬೇಸರವೋ,ಏರದ ವೇತನದ ವೇದನೆಯೋ,ಅಸೌಕರ್ಯಗಳೋ ಹೀಗೆ ನೂರಾರು ಕಾರಣಗಳಿರಬಹುದು.ಆದರೆ ನಮ್ಮ ರಾಜಿನಾಮೆಯು ಮೊಹಲ್ಲಾದಲ್ಲಿ ಯಾವುದೇ ಭಿನ್ನತೆಗೆ ಅವಕಾಶವೊದಗಿಸದಂತೆ ನಮಗಿರುವ ಅಸಮಾಧಾನವನ್ನು ರಾಜಿನಾಮೆ ಪತ್ರದಲ್ಲಿ ವ್ಯಕ್ತಪಡಿಸದಂತೆ  ಪತ್ರವಿರುವುದು ಆರೋಗ್ಯಕರವಾಗಿದೆ.ಅದನ್ನರಿತು ಕೊಂಡು ಸಂತೋಷದಿಂದ ಮೊಹಲ್ಲಾದಿಂದ ನಿರ್ಗಮಿಸುವುದೇ ಒಳ್ಳೆಯ ಬೆಳವಣಿಗೆಯ. ನಮ್ಮ ಸಿಟ್ಟನ್ನು ರಾಜಿನಾಮೆ ಪತ್ರದಲ್ಲಿ ತೀರಿಸದಿರುವುದು ಬುದ್ಧಿಯಾಗಿದೆ.
------------------------------
         *ಮಾದರಿ ರಾಜಿನಾಮೆ ಪತ್ರ*
----------------------------
ರಿಗೆ :
ಅಧ್ಯಕ್ಷರು ಹಾಗೂ ಸದಸ್ಯರು
.......................ಜಮಾಅತ್ ಕಮಿಟಿ
....................................

ರಿಂದ :
.................................
..................................

ವಿಷಯ :  ರಾಜಿನಾಮೆ ಪತ್ರ

ಮಾನ್ಯರೇ   ಅಸ್ಸಲಾಮು ಅಲೈಕುಂ

ನಾನು .................ಆಡಳಿತಕ್ಕೊಳಪಟ್ಟ ...................ಮದ್ರಸ/ಮಸೀದಿಯಲ್ಲಿ ಕಳೆದ ........ವರ್ಷಗಳಿಂದ .............ಆಗಿ ಸೇವೆ ಸಲ್ಲಿಸುತ್ತಿದ್ದು  ರಮಳಾನ್ ಬಳಿಕ ಇಲ್ಲಿ ಪ್ರಸ್ತುತ ಹುದ್ದೆಯಲ್ಲಿ ಮುಂದುವರಿಯುವ ಉದ್ದೇಶವಿಲ್ಲದಿರುವುದರಿಂದ ನನ್ನ ವೈಯುಕ್ತಿಕ ಕಾರಣಗಳಿಗಾಗಿ ಸ್ವ ಇಚ್ಛೆಯಿಂದ   ದಿನಾಂಕ ................ಕ್ಕೆ ನನ್ನ ಹುದ್ದೆಗೆ ರಾಜಿನಾಮೆ ನೀಡುತ್ತಿದ್ದೇನೆ.ನನ್ನ ಇಲ್ಲಿಯ ಸೇವಾವಧಿಯಲ್ಲಿ ನನಗೆ ಈ ಮೊಹಲ್ಲಾದವರು ನೀಡಿದ ಎಲ್ಲಾ ವಿಧದ ಪ್ರತ್ಯಕ್ಷ -ಪರೋಕ್ಷ ಸ್ನೇಹ ಸಹಕಾರಗಳಿಗೆ ನಾನು ತುಂಬಾ ಅಭಾರಿಯಾಗಿದ್ದೇನೆ. ವಹಿಸಿಕೊಂಡ ಹುದ್ದೆಯಲ್ಲಿ
ನನ್ನಿಂದ  ಏನಾದರೂ ಅತೃಪ್ತಿಕರ ವರ್ತನೆಗಳು  ಮನುಷ್ಯ ಸಹಜವಾಗಿ ಸಂಭವಿಸಿದ್ದರೆ ಅದಕ್ಕೆ ಕ್ಷಮೆಯಾಚಿಸುತ್ತಾ ಈ ರಾಜಿನಾಮೆ ಪತ್ರವನ್ನು ಸ್ವೀಕರಿಸಬೇಕೆಂದು ವಿನಂತಿಸುತ್ತೇನೆ.
ಅಲ್ಲಾಹು ಎಲ್ಲರಿಗೂ ಸುಖ,ಶಾಂತಿ,ನೆಮ್ಮದಿ  ಕರುಣಿಸಲಿ.ಆಮೀನ್

ದಿನಾಂಕ : 12-5-2017                      ಇತೀ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.