Skip to main content

ಕೇಂದ್ರ ಸರಕಾರದ ಗೋ ಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ದ.ಕ ಜಿಲ್ಲಾ ಎಸ್ಸೆಸ್ಸೆಫ್ ವತಿಯಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟಬಾ ಸಭೆಗೆ ಹರಿದು ಬಂದ ಜನಸಾಗರ

ಕೇಂದ್ರ ಸರಕಾರದ ಗೋ ಹತ್ಯೆ ನಿಷೇಧ ಕಾಯ್ದೆಯ ವಿರುದ್ಧ ದ.ಕ ಜಿಲ್ಲಾ ಎಸ್ಸೆಸ್ಸೆಫ್ ವತಿಯಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟಬಾ ಸಭೆಗೆ ಹರಿದು ಬಂದ ಜನಸ್ತೋಮ


ಆರೆಸ್ಸಸ್ ನ ಮುಸ್ಲಿಂ ರಾಷ್ಟ್ರೀಯ ಮಂಚ್ ಗೆ ಪಂಚ್ ನೀಡಿದ ಶಾಫಿ ಸ ಅದಿ.


ದೇಶದ ಮುಸಲ್ಮಾನರ ನಡುವೆ ಅನೈತಿಕತೆ ಮತ್ತು ಬಿಕ್ಕಟ್ಟು ಸೃಷ್ಟಿಸಿ ಸಮುದಾಯದ ಮಧ್ಯೆ ಅಪನಂಬಿಕೆ ಗಟ್ಟಿಗೊಳಿಸಲು ಆರೆಸ್ಸಸ್ ಸೃಷ್ಟಿ ಮಾಡಿದ ಸಂಘಟನೆಯಾಗಿದೆ ಮುಸ್ಲಿಂ ರಾಷ್ಟ್ರೀಯ ಮಂಚ್ (MRM).

ಆರೆಸ್ಸಸ್ ಪ್ರಮುಖ್ ಇಂದ್ರೇಶ್ ಕುಮಾರ್ ಅನತಿಯಂತೆ ನಡೆಯುವ ಸದ್ರಿ ಸಂಘಟನೆಯ ಹೊಸ ಪದ್ಧತಿಯಾದ ಕಾಶ್ಮೀರದಿಂದ ಕನ್ಯಾಕುಮಾರಿಯಾಗಿ ಅಮೃತಶರ ಪಾದಯಾತ್ರೆಯ ದುರುದ್ದೇಶದ ಬಗ್ಗೆ ಮಂಗಳೂರಿನಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಎಸ್ಸೆಸ್ಸಫ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ದಿಕ್ಸೂಚಿ ಭಾಷಣ ಮಾಡುತ್ತಾ ಖ್ಯಾತ ಭಾಷಣಗಾರ , ಮುಸ್ಲಿಂ ವಿದ್ವಾಂಸರಾದ ಮೌಲಾನ ಎನ್.ಕೆ‌.ಎಂ ಶಾಫಿ ಸ ಅದಿಯವರು ಸವಿವರವಾಗಿ ವಿವರಿಸಿದರು. 


ದೇಶದ ವಿವಿಧ ರಾಜ್ಯಗಳಲ್ಲಿ ಹಾದುಹೋಗುವ ಯಾತ್ರೆಯು ಸರಿಸುಮಾರು 12000 ಕಿ.ಮೀ ಸಂಚರಿಸಲಿದೆ. ಮುಸ್ಲಿಮರ ಪವಿತ್ರ ರಂಝಾನ್ ಹಬ್ಬದ ಮುಂಚಿತವಾಗಿ ನಡೆಯಲಿರುವ ಯಾತ್ರೆಯ ಉದ್ದೇಶ ಮುಸ್ಲಿಮರಿಗೆ ಖುರ್ ಆನ್ ಮತ್ತು ಹದೀಸ್ ನ ನಿಜಾಂಶ ಮನವರಿಕೆ ಮಾಡುವುದಾಗಿದೆ ಎಂಬುದನ್ನು ಮುಸ್ಲಿಂ ರಾಷ್ಟ್ರೀಯ ಮಂಚ್ ನ ಕನ್ವೀನರ್ ಶಹೀದ್ ಅಖ್ತರ್ ರವರ ಹೇಳಿಕೆ ಹಾಸ್ಯಾಸ್ಪದವೆಂದು ಶಾಫಿ ಸ ಅದಿಯವರು ವ್ಯಂಗ್ಯವಾಡಿದರು.

ಗೋಮಾಂಸ ಭಕ್ಷಣೆ ಕ

ಖುರ್ ಆನ್ ವಿರುದ್ದವಂತೆ ,ಗೋ ಹಾಲು ಮಾತ್ರ ಪೈಗಂಬರರು ಅನುಮತಿ ನೀಡಿದ್ದಂತೆ , ಯಾತ್ರೆಯಾದ್ಯಂತ ಮುಸಲ್ಮಾನರಿಗೆ ಇಫ್ತಾರ್ ಮಾಡಲು ಗೋ ಹಾಲನ್ನು ವಿತರಿಸಲಾಗುವುದು ಎಂದು ನಿರ್ಧರಿಸಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಗೆ ಗೋಮಾಂಸ ಭಕ್ಷಣದ ಬಗ್ಗೆ ಖುರ್ ಆನ್ ಆಯತ್ ಗಳು , ಹದೀಸ್ ಗಳು ಹಾಗೂ ಹಿಂದೂ ಸಂಸ್ಕೃತಿಯ ಮನುಸ್ಮೃತಿ, ಋಗ್ವೇದ ಮತ್ತು ಮಹಾಭಾರತವನ್ನು ವಿವರಿಸುತ್ತಾ ಗೋಮಾಂಸ ಸೇವನೆಯ ಅಧಿಕೃತ ದಾಖಲೆಯನ್ನು ನೀಡುತ್ತಾ ಮುಸ್ಲಿಂ ರಾಷ್ಟ್ರೀಯ ಮಂಚ್ ಗೆ ಚೆನ್ನಾಗಿ ಪಂಚ್ ಕೊಟ್ಟರು.


ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು  ಮುಸ್ಲಿಂ ರಾಷ್ಟ್ರೀಯ ಮಂಚ್ ನ ನಾಲಾಯಕ್ ನಾಯಕರ ಮಾತು ಕೇಳಿ ತ್ರಿವಳಿ ತಲಾಖ್ ಹಾಗೂ ಗೋ ಹತ್ಯೆ ನಿಷೇಧಕ್ಕೆ ಹೊರಟಿರುವುದು ಹಾಸ್ಯಾಸ್ಪದ ಎಂದು ಹೇಳಿದ ಶಾಫಿ ಸ ಅದಿಯವರು ಇದು ಉತ್ತರ ಪ್ರದೇಶದ ದಾದ್ರಿಯಲ್ಲ .ಟಿಪ್ಪು ಸುಲ್ತಾನ್ ಮತ್ತು ಬಸವಣ್ಣರ ಕರ್ನಾಟಕ ಎಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.


ಕೇಂದ್ರ ಸರ್ಕಾರದ ಉಭಯ ಸಚಿವರುಗಳಾದ ವೆಂಕಯ್ಯ ನಾಯ್ಡು ಮತ್ತು ಅರುಣ್ ಜೇಟ್ಲಿಯವರು ಗೋಹತ್ಯೆ ನಿಷೇಧವಲ್ಲ , ಗೋಹಿಂಸೆಯ ಪ್ರತಿಬಂಧಕ ಎಂಬ ಹೇಳಿಕೆಯನ್ನು ಖಂಡಿಸಿದ ಶಾಫಿ ಸ ಅದಿಯವರು ಇಂತಹ ಸೂಕ್ಷ್ಮ ವಿಷಯ ಕೈಗೆತ್ತಿಕೊಳ್ಳುವಾಗ ಎಲ್ಲಾ ಮಜಲುಗಳ ಬಗ್ಗೆ ಗಮನವಿಡಬೇಕಿತ್ತು. ಈ ಕಾನೂನುನಿಂದ ನೈತಿಕ ಪೋಲೀಸ್ ಗಿರಿ ಮಾಡುವವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದರು.

*ನಮ್ಮ ಶರೀಅತ್ ಮತ್ತು ಹಕ್ಕುಗಳನ್ನು ಕಸಿಯಲು ಯಾರು ಬಂದರೂ ಕಾನೂನು ರೀತಿಯ ಹೋರಾಟ ಮಾಡಿಯೇ ಸಿದ್ಧ ಎಂದು ಅವರು ಹೇಳಿದರು.*


ಬಿಜೆಪಿ ಸರ್ಕಾರದ ತ್ರಿವಳಿ ತಲಾಖ್ ನಿಷೇಧಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಹಾಗೂ ತ್ರಿವಳಿ ತಲಾಖ್ ,ಗೋಹತ್ಯೆ ಬಗ್ಗೆ ತುಟಿಪಿಟಿಕೆನ್ನದ ಕೇಂದ್ರ ಕಾಂಗ್ರೆಸ್ ನಾಯಕರ ವಿರುದ್ಧವೂ ಅವರು ಆರ್ಭಟಿಸಿದರು. ಬಿಜೆಪಿ ಯ ಕೋಮುವಾದಿ ನಿಲುವನ್ನು ಖಂಡಿಸದೆ ಮುಸ್ಲಿಮರ ದುಸ್ಥಿತಿಯಿಂದ ಮತಪಡೆಯಲು ಹೊಂಚು ಹಾಕುವ ಕಾಂಗ್ರೆಸ್ ಗರಿಗೆ ಗಂಭೀರವಾದ ಎಚ್ಚರಿಕೆಯನ್ನು ರವಾನಿಸಿದ ಶಾಫಿ ಸ ಅದಿ , ಮುಸ್ಲಿಮರಿಗೆ ಬಿಜೆಪಿ ಗುಮ್ಮವನ್ನು ತೋರಿಸಿ ಮತ ಪಡೆಯುವ ನಿಮ್ಮ ತಂತ್ರಕ್ಕೆ ಮುಂದಿನ ಚುನಾವಣೆಯಲ್ಲಿ ಪ್ರತಿತಂತ್ರ ಹೆಣೆಯಲಿದ್ದೇವೆ ಎಂಬುದನ್ನು ಅವರು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು.


*ವಾಯ್ಸ್ ಆಫ್ ಸುನ್ನೀ ಮಂಗಳೂರು.*


Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.