ಬ್ರಹ್ಮಾವರ ; ತಾಜುಲ್ ಉಲಮಾ ರಿಲೀಫ್ ಸೆಲ್ ಉಡುಪಿ ಡಿವಿಷನ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಿಲೀಪ್ ಸೆಲ್ ಅಧ್ಯಕ್ಷರಾದ ರಝಾಕ್ ಉಸ್ತಾದ್ ಅಂಬಾಗಿಲು ಮತ್ತು ಅಡ್ವಕೇಟ್ ಹಂಝತ್ ಹೆಜಮಾಡಿ ಇವರ ಸಮ್ಮಖದಲ್ಲಿ ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಯಲ್ಲಿನ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.ಈ ಸಂದರ್ಭದಲ್ಲಿ ಆಸ್ಪತ್ರೆ ವೈದಾದಿಕಾರಿ ಶ್ರೀ ಮಹೇಶ್,ರಿಲೀಫ್ ಸೆಲ್ ನ ಕಾರ್ಯದರ್ಶಿ ನಾಸೀರ್ ಭದ್ರಗಿರಿ,ಜೊತೆ ಕಾರ್ಯದರ್ಶಿ ನವಾಝ್ ಮಣಿಪುರ, ಉಪಾಧ್ಯಕ್ಷ ಶಂಶುದ್ದೀನ್ ಆರ್ ಕೆ, ಉಡುಪಿ ಡಿವಿಷನ್ ಕಾರ್ಯದರ್ಶಿ ನಝೀರ್ ಸಾಸ್ತಾನ, ಕೋಶಾಧಿಕಾರಿ ಇಬ್ರಾಹಿಂ ಆರ್ ಕೆ, ಬ್ರಹ್ಮಾವರ ಸೆಕ್ಟರ್ ಕೋಶಾಧಿಕಾರಿ ಸುಲೈಮಾನ್ ರಂಗನಕೆರೆ, ರಪೀಕ್ ಸಾಸ್ತಾನ ಉಪಸ್ಥಿತಿ ಇದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment