Skip to main content

ಕೆಸಿಎಫ್ ಕುವೈತ್ ಮಹಬುಲ ಸೆಕ್ಟರ್ ನ ನೂತನ ಸಾರಥಿಗಳು.


ಕೆಸಿಎಫ್ ಕುವೈತ್ ಮಹಬುಲ  ಸೆಕ್ಟರ್ ನ ವಾರ್ಷಿಕ ಮಹಾ ಸಭೆಯು ದಿನಾಂಕ 10/08/2017 ಇಶಾ ನಮಾಝಿನ ಬಳಿಕ,ಮಾಸಿಕ ಸ್ವಲಾತ್ ನ ನಂತರ ಮಹಬುಲದ ಲಾಂಡ್ರಿ ವಿಲ್ಲಾ ದಲ್ಲಿ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಉಸ್ತಾದರ ದುವಾದೊಂದಿಗೆ ಮಹಬುಲ ಸೆಕ್ಟರ್  ಅದ್ಯಕ್ಷರಾದ ಬಾವಕ ರವರ ಅದ್ಯಕ್ಷತೆಯಲ್ಲಿ ನಡೆಯಿತು.
ಕಳೆದ ವರ್ಷದ ವರದಿಯನ್ನು ನಿರ್ಗಮನ ಕಾರ್ಯದರ್ಶಿ ಸಲೀಂ ಬಂಟ್ವಾಳ ರವರು ವಾಚಿಸಿದರು.ಹಾಗೂ ಕೋಶಾಧಿಕಾರಿ ಮುನೀರ್ ಕಾರ್ಕಳ  ಲೆಕ್ಕ ಪತ್ರ ಮಂಡಿಸಿದರು. ನಂತರ ಮಾತನಾಡಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಕಾರ್ಕಳ ಮಾತನಾಡಿ  ಪ್ರವಾಸಿಗರಾದ ನಾವೆಲ್ಲರೂ ಪಾರತ್ರಿಕ ಬದುಕಿನ ಯಶಸ್ವಿಗಾಗಿ ದುಡಿಯಬೇಕು ಎಂದು ತಿಳಿಸಿದರು,   ಕೆಸಿಎಪ್  ಸಂಘಟನೆ  ಇದೆಲ್ಲಾ ಪರಲೋಕ ವಿಜಯಕ್ಕೆ ಸಿಗುವ ಕಾರ್ಯಗಳಾಗಿದೆ.  ಇಂತಹ ಪುಣ್ಯ  ಕಾರ್ಯಗಳು ಸಿಗಬೇಕಾದರೆ ಕೆಸಿಎಪ್ ಸದಸ್ಯರಾದರೆ ಮಾತ್ರ ಸಾದ್ಯ ಎಂದು ಹೇಳಿದರು.
ಸಭೆಯಲ್ಲಿ ರಾಷ್ಟ್ರೀಯ ನಾಯಕರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಉಸ್ತಾದ್, ಬಹುಮಾನ್ಯ ಫಾರೂಕ್ ಸಖಾಫಿ, ಜನಾಬ್ ಝಕ್ರಿಯಾ ಆನೆಕಲ್, ಜನಾಬ್ ಇಕ್ಬಾಲ್ ಪರ್ವಾನಿಯ, ಜನಾಬ್ ತೌಫೀಕ್ ಅಡ್ಡೂರ್ ಉಪಸ್ಥಿತರಿದ್ದರು.

*ನೂತನ ಅಧ್ಯಕ್ಷರಾಗಿ*
ಜನಾಬ್ ಬಾವಕ ಕುಪ್ಪೆಪದವು

*ಪ್ರಧಾನ ಕಾರ್ಯದರ್ಶಿ*
ಮುಹಮ್ಮದ್  ಮುಸ್ತಫ ಉಳ್ಳಾಲ

*ಕೋಶಾಧಿಕಾರಿ*
ಜನಾಬ್ ಮುನೀರ್ ಕಾರ್ಕಳ

*ಸಂಘಟನಾ ವಿಭಾಗ*
*_ಚೇಯರ್ಮ್ಯಾನ್_*  ಜನಾಬ್ ಅಶ್ರಫ್ ಕಾರ್ಗಳ್
*_ಕನ್ವೀನರ್_*  
ಜನಾಬ್ ಅನ್ವರ್ ಬಜ್ಪೆ

*ಶಿಕ್ಷಣ ವಿಭಾಗ*
*_ಚೇಯರ್ಮ್ಯಾನ್_* 
ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ
*_ಕನ್ವೀನರ್_*
  ಜನಾಬ್ ಮೂಸ ಪುತ್ತೂರು

*ಸಾಂತ್ವಾನ ವಿಭಾಗ*
*_ಚೇಯರ್ಮ್ಯಾನ್_*  ಜನಾಬ್ ಶಾಹಿದ್ ಗಂಗೊಳ್ಳಿ
*_ಕನ್ವೀನರ್_*
  ಜನಾಬ್ ಮುಸ್ತಾಕ್ ಮಂಗಳೂರು

*ಕಾರ್ಯಕಾರಿಣಿ ಸದಸ್ಯರು*
ಉಮರ್ ಝುಹ್ರಿ 
ಹುಸೈನ್ ಎರ್ಮಾಡ್
ತೌಫೀಕ್ ಕಾರ್ಕಳ
ನಝೀರ್ ಕಡಂಜೆ
ಮುಸ್ತಫ ವಿಟ್ಲ
ಸಲೀಂ ಬಂಟ್ವಾಳ
ಉಸ್ಮಾನ್ ಕೋಡಿ
ಅಬ್ದುಲ್ ರೌಫ್ ಉಳ್ಳಾಲ
ನೌಷದ್ ಕೊಡಗು
ತೌಫೀಕ್ ಅಡ್ಡೂರ್
ರಫೀಕ್ ತಾಜ್
ಆಯ್ಕೆ ಯಾದರು.

ರಾಷ್ಟ್ರೀಯ ನಾಯಕರುಗಳು ಹಾಗೂ ಮಹಬುಲ  ಸೆಕ್ಟರ್ ನ ಸಕ್ರಿಯ ಕಾರ್ಯಕರ್ತರು ಭಾಗವಹಿಸಿದ್ದರು
ಕೊನೆಯಲ್ಲಿ ಬಹುಮಾನ್ಯ ಫಾರೂಕ್ ಸಖಾಫಿ ಉಸ್ತಾದರ  ದುವಾದೊಂದಿಗೆ   ಕಾರ್ಯಕ್ರಮ ಕೊನೆಗೊಂಡಿತು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.