Skip to main content

ಮದುವೆ ,ಇನ್ನಿತರ ಶುಭ ಕಾರ್ಯಕ್ರಮಗಳಿಗೆ ಬೇರೆಯವರ ಚಿನ್ನ ಧರಿಸಿ ಹೋಗುವಿರಾ ಜೋಕೆ.

ಚಿನ್ನ ಧರಿಸದಿದ್ದರೆ ಅದೇನೋ ಹೆಣ್ಣಿಗೆ ಕೊರತೆಯೆನ್ನುವಂತೆ ಚಿನ್ನದ ಮೇಲಿನ ವ್ಯಾಮೋಹ ನವ ತರುಣಿಯರಿಂದ ಹಿಡಿದು ಮುದಿ ವಯಸ್ಸಿನ ಮಹಿಳೆಯರಿಂದಿಗೂ ಬೆಳೆದುಬಿಟ್ಟಿದೆ.
ವ್ಯಾಮೋಹಗಳು ಇರಲೇಬಾರದು ಅಂತಲ್ಲ.
ಕೆಲವರ ಅತಿಯಾದ ವ್ಯಾಮೋಹಗಳು ಹಾಗೂ ಚಿನ್ನ ಧರಿಸದಿದ್ದರೆ ಇನ್ನಿತರರ ಮುಂದೆ ನಾನು ಕೀಳಾಗಿ ಗುರುತಿಸಲ್ಪಡುವನೋ ಅನ್ನುವ ಅಂಜಿಕೆಗಳು ಹಲವು ಅವಾಂತರಗಳನ್ನು ಸೃಷ್ಟಿಸಿಬಿಡುತ್ತದೆ.

ಇಂದು ಬಹುತೇಕ ಮದುವೆ ,ಇನ್ನಿತರ ಶುಭ ಸಮಾರಂಭಗಳು ಮಹಿಳೆಯಂದಿರ ಅಲಂಕಾರದ ವೇದಿಕೆಗಳಾಗಿ ಗುರುತಿಸುವಷ್ಟರ ಮಟ್ಟಿಗೆ ಬದಲಾಗಿನಿಂತಿದೆ.
ಪವನ್ ಗಟ್ಟಲೆ ಚಿನ್ನ ಇರುವಂತಹ ಮಹಿಳೆಯರು ಅದನ್ನು ಪ್ರದರ್ಶನದ ವಸ್ತುಗಳನ್ನಾಗಿ ,ಬಡವರನ್ನು ಅಣಕಿಸುವ ರೀತಿಯಲ್ಲಿ ಪ್ರದರ್ಶಿಸಿ ಮೆರೆದಾಡುವಾಗ ಮಧ್ಯಮ ಹಾಗೂ ಬಡ ಕುಟುಂಬದ ಕೆಲವು ಮಹಿಳೆಯಂದಿರು ತಮ್ಮಲ್ಲಿ ಧರಿಸುವಂತಾಗಲು ಬೇಕಾದಷ್ಟು ಚಿನ್ನ ಇಲ್ಲದಿದ್ದರೂ ತಾನೂ ಸಹ ಅವರಿಗೇನು ಕಡಿಮೆ  ಇಲ್ಲದವರಂತೆ ಯಾರ್ಯಾರದೋ ಚಿನ್ನವನ್ನು ಪಡೆದುಕೊಂಡು ,ಅದನ್ನು ಹಾಕಿಕೊಂಡು ಶುಭ ಸಮಾರಂಭಗಳಲ್ಲಿ ಅದನ್ನು ಪ್ರದರ್ಶಿಸಲ್ಪಡುತ್ತಿದ್ದಾರೆ.

ಮದುವೆ ಇನ್ನಿತರ ಸಮಾರಂಭಗಳಲ್ಲಿ ಒಟ್ಟುಗೂಡಿದ ಮಹಿಳೆಯರು ಗುಂಪಾಗಿ ಮಾತುಗಳಿದರೆ ಅಲ್ಲಿ ಅದೇನು ನಡೆದರೂ ಅವರ ಗಮನಕ್ಕೆ ಬರುವಾಗ  ತುಂಬಾ ಸಮಯ ಕಳೆದುಬಿಡುತ್ತದೆ. ಇದನ್ನೇ ಬಂಡವಳನ್ನಾಗಿಸಿರುವ ಕೆಲವು ಮಹಿಳಾ ಕಳ್ಳಿಯಂದಿರು ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ತಮ್ಮ ಕೈ ಚಳಕ ತೋರಿಸುತ್ತಾರೆ.
ಯಾರಿಂದಲೋ ಪಡೆದುಕೊಂಡು ಬಂದ ಚಿನ್ನ ಇನ್ಯಾರದೋ ಕೈ ಸೇರಿದಾಗಾಗಿರುತ್ತದೆ ಬಹುತೇಕ ಮಹಿಳೆಯಂದಿರು ಎಚ್ಚರಗೊಳ್ಳುವುದು. ಇಂತಹ ಹಲವು ಪ್ರಕರಣಗಳು ನಡೆಯುತ್ತಲೇ ಇದೆ.

ಚಿನ್ನ ಅನ್ನುವುದು ಮಹಿಳೆಯರ ಅಭಿಮಾನದ ಪ್ರತೀಕ ಅನ್ನುವಂತೆ ಒಂದು ವರ್ಗ ಇಲ್ಲಿ ತಮ್ಮ ಲಾಭಗಳಿಗೋಸ್ಕರ ಬಿಂಬಿಸಿಬಿಟ್ಟಿದ್ದಾರೆ. ಇನ್ನು ಕೆಲವು ಯುವತಿಯರಿಗೆ ಮದುವೆಯ ಸಂದರ್ಭದಲ್ಲಿ ತನ್ನ ಹೆತ್ತವರು ಹಾಕಿದಂತಹ ಚಿನ್ನಾಭರಣಗಳು ಮದುವೆಯ ಪ್ರಥಮ ವಾರ್ಷಿಕವನ್ನು ಆಚರಿಸುವ ಮುನ್ನವೇ ಯಾವುದೋ ಬ್ಯಾಂಕ್ ಲಾಕರ್ ನೊಳಗೆ ಕೆಲವು ಗಂಡಂದಿರು ಅನಿವಾರ್ಯವಾಗಿಯೋ, ಅನಿವಾರ್ಯತೆಯನ್ನು ಸೃಷ್ಟಿಸಿಯೋ ಅಡವಿಟ್ಟಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅವರ ಕುಟುಂಬದಲ್ಲಿ ನಡೆಯುವ ಶುಭ ಕಾರ್ಯಗಳಿಗೆ ಇನ್ಯಾರದೋ ಚಿನ್ನವನ್ನು ಪಡೆದುಕೊಂಡು ಹೋಗಬೇಕಾದ ಪರಿಸ್ಥಿತಿಗಳು ಉದ್ಭವವಾಗುತ್ತಿದೆ.
ಬಹುತೇಕ ಮಹಿಳೆಯರಿಗೆ ತನ್ನ ಚಿನ್ನವನ್ನು ಇನ್ನೊಬ್ಬರಿಗೆ ನೀಡಲು ಇಷ್ಟವಿಲ್ಲದಿದ್ದರೂ , ಅನಿವಾರ್ಯತೆಗೆ ಒಗ್ಗಿಕೊಂಡು ಒಲ್ಲದ ಮನಸ್ಸಿನಿಂದ ಕೊಡುತ್ತಾರೆ.
ಇನ್ನು ಕೆಲವು ಸಂದರ್ಭಗಳಲ್ಲಿ ಇಂತಹ ವಿಷಯಗಳು ಸಂಬಂಧಳ ನಡುವೆ ಕಂದಕ ಸೃಷ್ಟಿಯಾಗಲು ಕಾರಣಗಳಾಗುತ್ತಿದೆ.
ನಂಬಿಕೆಯ ಆಧಾರದ ಮೇಲೆ ಚಿನ್ನವನ್ನು ಪಡೆದು ಅದನ್ನು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಬ್ಯಾಂಕಿನಲ್ಲಿ ಅಡವಿಡುವ ಅದೆಷ್ಟೋ ಪ್ರಕರಣಗಳು ನಮ್ಮ ಸಮಾಜದ ನಡುವೆ ದಿನನಿತ್ಯ ನಡೆಯುತ್ತಿದೆ.
ಆದುದರಿಂದ ನಿಮ್ಮ ಚಿನ್ನಾಭರಣಗಳನ್ನು ಇತರರಿಗೆ ನೀಡುವಾಗಲೋ, ಇತರರಿಂದ ಪಡೆಯುವಾಗಲೋ ನೂರು ಬಾರಿ ಯೋಚಿಸಿರಿ.
ಲಜ್ಜೆಗಿಂತ ದೊಡ್ಡ ಸೌಂದರ್ಯ ಹೆಣ್ಣಿಗಿಲ್ಲ.
ಚಿನ್ನವನ್ನು ನಿಮ್ಮ ಅಭಿಮಾನದ ಪ್ರತೀಕವಾಗಿ ಪ್ರದರ್ಶಿಸುವಾಗ , ಅದೇ ಚಿನ್ನದ ವ್ಯಾಮೋಹ ನಿಮ್ಮನ್ನು ಸಂಕಷ್ಟಕ್ಕೊಳಪಡಿಸದಂತೆ ಜಾಗರೂಕರಾಗಿರಿ.

✍🏻ಸ್ನೇಹಜೀವಿ ಅಡ್ಕ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.