ಬ್ರಹ್ಮಾವರ : ಈ ದೇಶದ ಸರ್ವ ಜನರು ಜಾತಿ, ಮತ, ಬೇದ ರಹಿತವಾಗಿ ಒಗ್ಗೂಡಿದರೆ ಈ ದೇಶದ ಒಂದು ಹಿಂಡು ಭೂಮಿಯನ್ನು ಕದಲುಸಲು ಯಾರಿಂದಲೂ ಸಾಧ್ಯವಿಲ್ಲ ಎಂದು 71 ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ಸೆಸ್ಸೆಪ್ ಬ್ರಹ್ಮಾವರ ಸೆಕ್ಟರ್ ವತಿಯಿಂದ ಹೊನ್ನಾಳ ಬಸ್ ನಿಲ್ದಾಣ ಬಳಿ ನಡೆದ "ಸ್ವಾತಂತ್ರ್ಯ ಸಂದೇಶ ಭಾಷಣ" ಕಾರ್ಯಕ್ರಮದಲ್ಲಿ ಮುಖ್ಯ ಸಂದೇಶ ಭಾಷಣ ಮಾಡಿದ ಎಸ್ಸೆಸ್ಸೆಪ್ ಉಡುಪಿ ಜಿಲ್ಲ್ಲಾ ಅಧ್ಯಕ್ಷರಾದ ಅಶ್ರಫ್ ರಝಾ ಅಂಜದಿ ಇವರು ಮಾತನಾಡಿದರು.ಎಲ್ಲಿಯವರೆಗೆ ನಮ್ಮೊಳಗೆ ನಾವುಗಳು ಎಂದು ಮನೋಭಾವನೆ ಬಿಟ್ಟು ನಾನು ಎಂಬ ಭಾವನೆ ಇರುತ್ತೊ ಅಲ್ಲಿಯವರೆಗು ಪ್ರಗತಿ ಸಾದಿಸಲು ಆಗುವುದಿಲ್ಲ, ಇದು ವಿನಾಶಕ್ಕೆ ಕಾರಣವಾಗುತ್ತೆ ಎಂದು ಇನ್ನೊರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಪತ್ರಿಕೋದ್ಯಮ ಪ್ರಾದ್ಯಪಕರಾದ ಮಂಜಪ್ಪ ಡಿ.ಗೋನಿ ಇವರು ತಿಳಿಸಿದರು.ಬ್ರಹ್ಮಾವರ ಸೆಕ್ಟರ್ ಅಧ್ಯಕ್ಷ ಇಮ್ತಿಯಾಝ್ ಹೊನ್ನಾಳ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು, ಎಸ್ ವೈ ಎಸ್ ರಾಜ್ಯ ಸದಸ್ಯ ಅಡ್ವಕೇಟ್ ಹಂಝತ್ ಹೆಜಮಾಡಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಎಸ್ಸೆಸ್ಸೆಪ್ ಉಡುಪಿ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಹದಿ,ಜಾಮಿಯ ಮಸೀದಿ ಹೊನ್ನಾಳ ಅಧ್ಯಕ್ಷರಾದ ಇಮಾಮ್ ಸಾಹೆಬ್,ಉದ್ಯಮಿಯಾದ ಮುಸ್ತಾಕ್ ಅಹಮದ್,ರಿಲೀಪ್ ಸೆಲ್ ಅಧ್ಯಕ್ಷರಾದ ರಝಾಕ್ ಉಸ್ತಾದ್, ಸೆಕ್ಟರ್ ಉಸ್ತುವಾರಿ ಶಾಹುಲ್ ದೊಡ್ಡಣಗುಡ್ಡೆ, ಸೆಕ್ಟರ್ ಕೋಶಾಧಿಕಾರಿ ಸುಲೈಮಾನ್ ರಂಗನಕೆರೆ,ಡಿವಿಷನ್ ಪ್ರ.ಕಾರ್ಯದರ್ಶಿ ನಝೀರ್ ಸಾಸ್ತಾನ, ಶಂಶುದ್ದೀನ್,ಸುಹೈಬ್, ಅಶ್ರಫ್ ಬೈಕಾಡಿ,ಇಬ್ರಾಹಿಂ ಆರ್ ಕೆ,ರಪೀಕ್,ನವಾಝ್ ಮಣಿಪುರ ಉಪಸ್ಥಿತಿತರಿದ್ದರು.ಸೆಕ್ಟರ್ ಗವರವ ಸಲಹೆಗಾರರಾದ ಸುಬುಹಾನ್ ಹೊನ್ನಾಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸೆಕ್ಟರ್ ಕಾರ್ಯದರ್ಶಿ ನಾಸೀರ್ ಭದ್ರಗಿರಿ ವಂದಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment