Skip to main content

ಶೈಖುನಾ ಜಿ.ಎಂ. ಕಾಮಿಲ್ ಸಖಾಫಿ ಉಸ್ತಾದರ ಶಿಷ್ಯಂದಿರ 'ಸಿರಾಜುಲ್ ಫಲಾಹ್ ಅಸೋಸಿಯೇಶನ್ [SFA] ನೂತನ ಸಮಿತಿ ಅಸ್ತಿತ್ವಕ್ಕೆ


ಹಲವು ವರ್ಷಗಳ  ಕಾಲ ದರ್ಸ್ ರಂಗದಲ್ಲಿದ್ದು ,ನೂರಾರು ಶಿಷ್ಯ ಸಮೂಹವನ್ನು ಸಮಾಜಕ್ಕೆ ಅರ್ಪಿಸಿದ ಶೈಖುನಾ ಜಿ.ಎಂ.ಉಸ್ತಾದರ. ಶಿಷ್ಯಂದಿರ ಸಂಗಮ ದಿನಾಂಕ-23/8/2017 ರಂದು ಅಮ್ಮೆಂಬಳದಲ್ಲಿ ನಡೆಯಿತು.
ಶೈಖುನಾ ಜಿ ಎಂ ಉಸ್ತಾದರ ದುಆ ಆಶೀರ್ವಚನದ ನಂತರ ಬೃಹತ್ ಬದ್ರ್ ಮೌಲೀದ್ ಮಜ್ಲಿಸ್' ನಡೆಯಿತು. ಬಳಿಕ ನಮ್ಮಿಂದ ಅಗಲಿದ  ಉಸ್ತಾದರ ಪ್ರಮುಖ ಶಿಷ್ಯಂದಿರಿಬ್ಬರಾದ ಮರ್ಹೂಂ  ಮನ್ಸೂರ್ ಸಖಾಫಿ ಬೆಳ್ಮ ಹಾಗು ಮರ್ಹೂಂ ಅಶ್ರಫ್ ಮುಸ್ಲಿಯಾರ್,ಅಮ್ಮೆಂಬಳ ಇವರ ಮೇಲೆ ತಹ್ಲೀಲ್ ಸಮರ್ಪಣೆ ಗೈದು ದುಆಃ ಮಾಡಲಾಯಿತು. ನಂತರ ಪ್ರಾರಂಭ ಗೊಂಡ ಸಭೆಯಲ್ಲಿ ರಫೀಖ್ ಸಖಾಫಿ ಮುರ ಪ್ರಾಸ್ತಾವಿಕ ಭಾಷಣ ಮಾಡಿದರು.ತದನಂತರ ಶೈಖುನಾ ಉಸ್ತಾದರಿಂದ ಆಧ್ಯಾತ್ಮಿಕ ತರಗತಿ ನಡೆಯಿತು.
ಬಳಿಕ. ಸಿರಾಜುಲ್ ಫಲಾಹ್ ಅಸೋಸಿಯೇಶನ್[SFA] ಹೆಸರಿನೊಂದಿಗೆ ನೂತನ ಸಮಿತಿಯನ್ನು ರಚಿಸಲಾಯಿತು.
ಸಿರಾಜುಲ್ ಫಲಾಹ್ ಅಸೋಸಿಯೇಶನ್ ( SFA ) ಇದರ 2017-18 ರ ನೂತನ ಸಾರಥಿಗಳು.
ನಿರ್ದೇಶಕರು : ಶೈಖುನಾ ಜಿ.ಎಂ.ಎಂ.ಕಾಮಿಲ್ ಸಖಾಫಿ.
ಅಧ್ಯಕ್ಷರು : ರಫೀಖ್ ಸಖಾಫಿ ಮುರ.
ಉಪಾಧ್ಯಕ್ಷರು : ಅಬ್ದುಲ್ ಹಮೀದ್,ಕುಕ್ಕಾಜೆ,
ಸಫ್ವಾನ್ ಸಖಾಫಿ,ಮೂಡ ಬಿದ್ರೆ.
ಪ್ರ.ಕಾರ್ಯದರ್ಶಿ : ಅಬ್ದುರ್ರಹ್ಮಾನ್ ಮುಸ್ಲಿಯಾರ್,ಬೋಳಿಯಾರ್.
ಜತೆ ಕಾರ್ಯದರ್ಶಿಗಳು : ನಾಸಿರ್ ಮದನಿ ಸೂರಿಂಜೆ,
ಇಕ್ಬಾಲ್ ಮಾರಿಪಳ್ಳ.
ಕೋಶಾಧಿಕಾರಿ : ಹೈದರ್ ಮದನಿ ಕೋಟೆ ಸೂರಿಂಜೆ.
ಸಂಘಟನಾ ಕಾರ್ಯದರ್ಶಿ : ಮುಹಮ್ಮದ್ ಸಖಾಫಿ ಕನ್ಯಾಡಿ.
ಕಾರ್ಯಕಾರಿ ಸಮಿತಿ ಸದಸ್ಯರು
ಇಸ್ಮಾಈಲ್ ಮುಸ್ಲಿಯಾರ್ ಗೋಳ್ತ ಮಜಲ್, ಜಿ.ಎಂ.ಬಶೀರ್ ಮದನಿ ಪಾಣೆ ಮಂಗಳೂರು,
ಶರೀಫ್ ಸಖಾಫಿ ಉರುಮಣೆ,
ಇಮ್ರಾನ್  ಉಳ್ಳಾಲ,
ಪಿ.ಕೆ.ಎಂ.ಹನೀಫ್ ಉರುವಾಲು ಪದವು,
ಪಿ.ಎಸ್.ಅಶ್ರಫ್ ಮಸ್ಲಿಯಾರ್,ಮೋಂತಿಮಾರ್,
ಬದ್ರುದ್ದೀನ್  ಅಮ್ಮೆಂಬಳ,
ಉಬೈದುಲ್ಲಾ ಸಖಾಫಿ ಸಜೀಪ,
ಅಬ್ದುರ್ರಹ್ಮಾನ್ ಬದ್ರೀ,ಸಾಗರ,
ಮುಬಾರಕ್ ಬೋಳಿಯಾರ್ ಇವರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.
ಇದೇ ಸಮಯದಲ್ಲಿ ಕೆಲವು ತಿಂಗಳುಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಉಸ್ತಾದರ ಶಿಷ್ಯ ಎನ್.ಎಸ್.ಅಬೂಬಕ್ಕರ್ ಅವರಿಗೆ ಶಿಷ್ಯಂದಿರು ಸಂಗ್ರಹಿಸಿದ್ದ ಬಾಕಿ ಮೊತ್ತವನ್ನು ಹಸ್ತಾಂತರಿಸಲಾಯಿತು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.