Skip to main content

ಮ್ಯಾನ್ಮಾರ್ ನಲ್ಲಿ ಮುಸ್ಲಿಮರಿಗೆ ರಕ್ಷಣೆ ನೀಡಲು ಸರಕಾರಕ್ಕೆ ಬಾಯಾರ್ ತಂಙಳ್ ಕರೆ

           ಮ್ಯಾನ್ಮರ್‍ನಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಗುರಿಯಾಗಿಸಿ ನಡೆಯುತ್ತಿರುವ ಮಾರಣ ಹೋಮ ಕ್ರೌರ್ಯ ಕಳವಳಕಾರಿಯಾದುದ್ದು ಮತ್ತು ಹೃದಯ ವಿಧ್ರವಕವಾದುದು. ಮ್ಯಾನ್ಮರ್ ಸರಕಾರದ ಆದೇಶದ ಮೇರೆಗೆ ಆ ದೇಶದ ಸೈನ್ಯ ಮತ್ತು ಅರಕಾನ್ ಬೌದ್ಧರು ರೋಹಿಂಗ್ಯಾ ಮುಸ್ಲಿಮರನ್ನು ಸರ್ವನಾಶ ಮಾಡುತ್ತಿದ್ದು ಮ್ಯಾನ್ಮರ್ ಸರಕಾರದ ಈ ತೀರ್ಪನ್ನು ಮರುಪರಿಶೀಲನೆ ನಡೆಸಿ ಮುಸ್ಲಿಮರಿಗೆ ರಕ್ಷಣೆ ನೀಡಬೇಕು ಎಂದು ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಇಂಬಿಚ್ಚಿ ಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ಹೇಳಿದರು.
ಅವರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ಕಾಸರಕೋಡುವಿನ ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಾ ಸಂಸ್ಥೆಯಲ್ಲಿ ನಡೆಸಿಕೊಂಡು ಬರುವ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ಮರ್ಹೂಂ ಪೊಸೋಟು ಉಮರುಲ್ ಫಾರೂಕ್ ತಂಙಳ್ ಅನುಸ್ಮರಣೆ ಕಾರ್ಯಕ್ರಮದ ನೇತೃತ್ವವಹಿಸಿ ಮತನಾಡಿದರು.
ಇತ್ತಿಚೆಗಿನ ಎಲ್ಲಾ ಪ್ರಕರಣಗಳನ್ನು ನೋಡಿದಾಗ ಪ್ರವಾದಿ ಹೆಳೀದ ಜಗತ್ತಿನ ಅಂತ್ಯ ದಿನದ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಮುಸ್ಲಮಾನರು ತನ್ನ ಜೀವನದಲ್ಲಿ ನಡೆದ ತಪ್ಪುಗಳನ್ನು ಅಲ್ಲಾಹನದಲ್ಲಿ ಕ್ಷಮೆಯಾಚಿಸಲು ಮುಂದಾಗಬೇಕು ಎಂದು ಹೇಳಿದರು.
ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಅಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಪಯಸ್ವಿ ಮುಖ್ಯ ಪ್ರಭಾಷಣಗೈದರು. ಬಾಯಾರ್ ಮುಜಮ್ಮವುಸಖಾಪತಿ ಸುನ್ನಿಯ್ಯಾದ ಅಂಗ್ಲ ಮಾಧ್ಯಮ ವಿದ್ಯಾರ್ಥಿಗಳು ರಚಿಸಿದ ಕೈಬರಹ ಮಾಸಿಕವನ್ನು ಪುತ್ತು ಮೋನು ಹಾಜಿ ಚಿಕ್ಕಮಗಳೂರುಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.
ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಕಾಸರಕೋಡು ಜಿಲ್ಲಾ ಉಪಾಧ್ಯಕ್ಷ ಸಯ್ಯದ್ ಜಲಾಲುದ್ದೀನ್ ತಂಙಳ್ ಮಳ್‍ಹರ್, ಸಕಲೇಶಪುರ ತಂಙಳ್, ಅಲ್-ಮದೀನಾ ವಿದ್ಯಾ ಸಂಸ್ಥೆಯ ಶಿಲ್ಪಿ ಅಬ್ಬಾಸ್ ಉಸ್ತಾದ್ ಮಂಜನಾಡಿ, ಸಮಸ್ತ ಕೇರಳ ಸುನ್ನೀ ಯುವಜನ ಸಂಘ ಉಪಾಧ್ಯಕ್ಷ ಪಲ್ಲಂಗೋಡು ಅಬ್ದುಲ್ ಖಾದರ್ ಮದನಿ, ಮುಹೀಮ್ಮತ್ ಮುಸ್ಲಿಮೀನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಎಸ್ ಉಸ್ತಾದ್, ಕಡ್ವತ್ತೂರು ಖಾಝಿ, ರಫೀಕ್ ಸಅದಿ ದೇಲಂಪಾಡಿ, ಹಂಝ ವಿಸ್ಬಾಯಿ, ಉಮರ್ ಸಖಾಫಿ ಮುಹಿಮ್ಮತ್, ಬಶೀರ್ ಸಖಾಫಿ ಕೊಲ್ಯಂ, ಅಶ್ರಫ್ ಹಾಜಿ ಅಡ್ಯಾರ್, ಉಮರ್ ಹಾಜಿ, ಇಬ್ರಾಹೀಂ ಕುಟ್ಟಿ ಹಾಜಿ ಚೆಮ್ಮಾಡ್, , ಅಶ್ರಫ್ ಸಅದಿ ಮಲ್ಲೂರು, ಶಾಕೀರ್ ಹಾಜಿ ಮಿತ್ತೂರು, ಕಡ್ವತ್ತೂರು ಅಬ್ದುಲ್ಲಾ ಮುಸ್ಲಿಯಾರ್, ನಾಸೀರ್ ಬಾಳೆಹ್ನೂರು, ಉದ್ಯಮಿಗಳಾದ ಸಿದ್ದೀಕ್ ಹಾಜಿ, ಅಶ್ರಫ್ ಹಾಜಿ ಈ ಸಂದರ್ಭ ಉಪಸ್ಥಿತರಿದರು.
ಸಂಸ್ಥ ಮ್ಯಾನೇಜರ್ ಸಿದ್ದೀಕ್ ಸಖಾಫಿ ಬಾಯರ್ ಸ್ವಾಗತಿಸಿದರು. ಪೋಯ್ಯತ್ತಬೈಲ್ ಖತೀಬ್ ಜಬ್ಬಾರ್ ಸಖಾಫಿ ಪಾತೂರು ವಂದಿಸಿದರು.

ವರದಿ ಆರ್ಕೆ ಮದನಿ ಅಮ್ಮೆಂಬಳ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.