Skip to main content

ಇತಿಹಾಸ ನಿರ್ಮಿಸಲಿರುವ ಉಲಮಾ ಕಾಂಫರೆನ್ಸ್

ಇತಿಹಾಸ ನಿರ್ಮಾಣದತ್ತ ಉಲಮಾ ಕಾಂಫರೆನ್ಸ್

ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಆಶ್ರಯದಲ್ಲಿ ಅಕ್ಟೊಬರ್ -08-09-10 ರಂದು ಉಪ್ಪಿನಂಗಡಿಯ ಹ್ರದಯ ಭಾಗದ ತಾಜುಲ್ ಉಲಮಾ ನಗರದಲ್ಲಿ ಸಕಲ ಸುಸಜ್ಜಿತ ಸಜ್ಜೀಕರಣದೊಂದಿಗೆ ಕರ್ನಾಟಕದ ಉಲಮಾಗಳಿಗಾಗಿ ವ್ಯವಸ್ಥೆ ಮಾಡಲ್ಪಟ್ಟ ಬ್ರಹತ್ ಉಲಮಾ ಕಾಂಫರೆನ್ಸ್.

ಕರ್ನಾಟಕದ ಪ್ರತಿಯೊಂದು ಊರು-ಕೇರಿಗಳಿಂದಲೂ, ಗಲ್ಲಿಗಲ್ಲಿಗಳಿಂದಲೂ ಹರಿದು ಬರಲಿರುವ ಉಲಮಾಗಳು.. ಮದನಿಗಳು, ಸಖಾಫಿಗಳು, ಸಅದಿಗಳು, ಅಮ್ಜದಿಗಳು, ನಿಝಾಮಿಗಳು, ಝುಹರಿಗಳು, ಅಹ್ಸನಿಗಳು, ಹಿಮಮಿಗಳು, ಹನೀಫಿಗಳು, ಜೌಹರಿಗಳು, ಬಾಖವಿಗಳು,  ಇಮ್ದಾದಿಗಳು, ಅಮಾನಿಗಳು, ಲತೀಫಿಗಳು, ಮಿಸ್ಬಾಹಿಗಳು  ಇತ್ಯಾದಿ ಬಿರುದುದಾರಿಗಳಾದ ಮತ್ತು ಬಿರುದುದಾರಿಗಳಲ್ಲದ ಉಲಮಾಗಳು ಸಂಗಮಿಸುವ ಕರ್ನಾಟಕದ ಅತ್ಯಂತ ದೊಡ್ಡ ಚಾರಿತ್ರಿಕ ಸಂಗಮ.
        ವಿವಿಧ ವಿಷಯಗಳು ವಿವಿಧ ಹಂತಗಳಲ್ಲಿ ಸುಪ್ರಸಿದ್ಧ ಉಲಮಾಗಳಿಂದ ತರಗತಿ ನಡೆಸಲ್ಪಡುವ ಅಪೂರ್ವ ಸಮ್ಮಿಲನ. ಮೂರು ದಿನಗಳವೆರೆಗೆ ನಡೆಯುವ ಈ ಕಾಂಫರೆನ್ಸ್ ನಲ್ಲಿ ಉದ್ಘಾಟನಾ ಸೆಷನ್, ವಿಚಾರಗೋಷ್ಠಿ, ಚರ್ಚಾ ವೇದಿಕೆ, ಆಧ್ಯಾತ್ಮಿಕ ಸಂಗಮ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ.
       ಸುಲ್ತಾನುಲ್ ಉಲಮಾ ಎಪಿ ಉಸ್ತಾದ್, ಸಯ್ಯಿದ್ ಖಲೀಲುಲ್ ಬುಖಾರಿ ಕಡಲುಂಡಿ ತಂಗಳ್, ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್, ಬೇಕಲ್ ಉಸ್ತಾದ್, ಪೊನ್ಮಳ ಉಸ್ತಾದ್, ಕೂಟಂಬಾರ ದಾರಿಮಿ ಮುಂತಾದ ಉಲಮಾ ಸಾದಾತು ದಿಗ್ಗಜರು ನೇತ್ರತ್ವ ನೀಡಲಿರುವ ಕಾಂಫರೆನ್ಸ್.

💧💧💧💧💧💧💧💧💧💧💧

*ಮೂರುದಿನಗಳು ಕರ್ನಾಟಕದ ಸರ್ವ ಉಲಮಾಗಳು ಉಪ್ಪಿನಂಗಡಿ ತಾಜುಲ್ ಉಲಮಾ ನಗರದಲ್ಲಿ ಸಂಗಮಿಸುವುದು ಅನಿವಾರ್ಯ*

ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಅಧೀನದಲ್ಲಿ ಜಿಲ್ಲೆ, ತಾಲೂಕು ಹಾಗು ಝೋನಲ್ ಸಮಿತಿಗಳು ಕಾರ್ಯ ನಿರ್ವಹಿಸುತ್ತಿದ್ದು, ಜಂಇಯ್ಯತುಲ್ ಉಲಮಾ ಇದರ ಸದಸ್ಯತನ ಅಭಿಯಾನವೂ ಚುರುಕು ಪಡೆಯುತ್ತಿದ್ದು ಅಕ್ಟೊಬರ್ 8-9-10 ರಂದು ನಡೆಯುವ ಉಲಮಾ ಕಾಂಫರೆನ್ಸ್ ಅದ್ಭುತ ಯಶಸ್ಸು ಪಡೆಯುವುದರಲ್ಲಿ ಸಂಶಯವಿಲ್ಲ.

ಉಲಮಾ ಕಾಂಫರೆನ್ಸಿಗೆ ಆಗಮಿಸುವ ಉಲಮಾಗಳು ತಮ್ಮ ಝೋನಲ್ ಸಮಿತಿಯನ್ನು ಸಂಪರ್ಕಿಸಿ ಹೆಸರು ನೊಂದಾಯಿಸತಕ್ಕದ್ದು, ಝೋನಲ್ ವ್ಯಾಪ್ತಿಗೆ ಬರುವ ರೆಂಜಿನ ಮದ್ರಸ ಮಸೀದಿ ಉಸ್ತಾದರುಗಳಲ್ಲದೆ ಅ ಊರಿನ ಉಸ್ತಾದರುಗಳೂ ಉಲಮಾ ಸಂಗಮದಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.

ಉಲಮಾ ಕಾಂಫರೆನ್ಸ್ ನಲ್ಲಿ ಭಾಗವಹಿಸುವಿಕೆಯ ಸ್ಪಷ್ಟ ಮಾಹಿತಿಗಾಗಿ ತಮ್ಮ ಝೋನಲ್ ಸಮಿತಿಯ ಕಾರ್ಯದರ್ಶಿಗಳನ್ನು ಸಂಪರ್ಕಿಸಿ, ತಾವು ವಾಸಿಸುವ ಸ್ಥಳದಲ್ಲಿ ಝೋನಲ್ ಸಮಿತಿ ರಚನೆಯಾಗದಿದ್ದಲ್ಲಿ ಎಸ್ ಪಿ ಹಂಝ ಸಖಾಫಿ, ಯೂಸುಫ್ ಸಅದಿ ಅಥವಾ ತೋಕೆ ಮುಹ್ಯಿದ್ದೀನ್ ಕಾಮಿಲ್ ಸಖಾಫಿಯನ್ನು ಸಂಪರ್ಕಿಸಬಹುದು.

💧💧💧💧💧💧💧💧💧💧💧

ಉಲಮಾಗಳೇ...
             ಮರೆಯದಿರಿ.....
ಉಲಮಾಗಳಿಂದ
             ಉಲಮಾಗಳ ಒಳಿತಿಗಾಗಿ
ಸಮುದಾಯದ ಉನ್ನತಿಗಾಗಿ

✍ *ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ*

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.