Skip to main content

ಉರುವಾಲು ಪದವು ಡೆವಲಪ್ ಮೆಂಟ್ ಕಮಿಟಿ[UDC],ರಿಯಾದ್,ಸೌದಿ ಅರೇಬಿಯಾ 'ವಾರ್ಷಿಕ ಮಹಾಸಭೆ' ನೂತನ ಅಧ್ಯಕ್ಷರಾಗಿ-ಪಿ.ಕೆ ದಾವೂದ್ ಸಅದಿ ಆಯ್ಕೆ

ರಿಯಾದ್: ತಮ್ಮ ಕುಟುಂಬ ನಿರ್ವಹಣೆಗಾಗಿ ಪ್ರವಾಸಿ ಜೀವನ ನಡೆಸುತ್ತಿರುವ ಉರುವಾಲು ಪದವು ಜಮಾಅತ್ತಿನ ಸುನ್ನೀ ಕಾರ್ಯಕರ್ತರು,ತಮಗೆ ಸಿಗುವ ಸಂಬಳದಿಂದ ಒಂದಲ್ಪ ತಮ್ಮ ಊರಿನಲ್ಲಿರುವ ಕಡು ಬಡವರ ಸಹಾಯ ಮಾಡುವ ಮತ್ತು ಜಮಾಅತ್ತಿನ ಸರ್ವಾಂಗೀಣ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಳೆದೊಂದು ವರ್ಷ ಹಿಂದೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಅಸ್ತಿತ್ವಕ್ಕೆ ಬಂದ ಸಮಿತಿ 'ಉರುವಾಲು ಪದವು ಡೆವಲ್ಪ್ ಮೆಂಟ್ [UDC]'ರಿಯಾದ್ ಸೌದಿ ಅರೇಬಿಯಾ,

ಇದರ. ಸ್ವಲಾತ್ ವಾರ್ಷಿಕ ಮತ್ತು ವಾರ್ಷಿಕ ಮಹಾಸಭೆಯು ದಿನಾಂಕ -8/9/2017 ಶುಕ್ರವಾರ ಅಬ್ದುಲ್ ಕರೀಮ್ ಲತೀಫಿ,ಬೇಂಗಿಲ (ಆರ್ಗನೈಝರ್,ಮದೀನತುಲ್ ಉಲೂಂ ಎಜಿಕೇಶನ್ ಅಕಾಡೆಮಿ,ಮೂಡಡ್ಕ, ಸೌದಿ ಘಟಕ)ಇವರ ನೇತೃತ್ವದಲ್ಲಿ ನಡೆಯಿತು.

ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿ ಉರುವಾಲು ಪದವು ಸ್ವಾಗತಿಸಿ ಸಮಿತಿಯ ಚೊಚ್ಚಲ ಒಂದು ವರ್ಷದ ಕಾರ್ಯ ಚಟುವಟಿಕೆಯ ಕುರಿತು ಹೃಸ್ವ ವಾಗಿ ವಿವರಿಸಿದರು.
ಸಂಶುದ್ದೀನ್ ಝುಹ್ರಿ ಖಿರಾಅತ್ ಪಠಿಸಿದ ಸಭೆಯನ್ನು  ಇಸ್ಹಾಖ್ ಮದನಿ ಉರುವಾಲು ಪದವು ಉದ್ಘಾಟಿಸಿದರು.

ಬಳಿಕ ಕಾರ್ಯದರ್ಶಿ ದಾವೂದ್ ಸಅದಿ ಮಂಡಿಸಿದ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡನೆ'ಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ತದನಂತರ ಸಮಿತಿ ಹಾಲಿ ಅಧ್ಯಕ್ಷರಾಗಿದ್ದ ಅಬ್ದುಲ್ಲತೀಫ್ ಉರುವಾಲು ಪದವು ಅವರಿಂದ ಭಾಷಣ ನಡೆಯಿತು.

ಬಳಿಕ ಸಭೆಯ ಅಧ್ಯಕ್ಷರಾದ  ಅಬ್ದುಲ್ ಕರೀಮ್ ಲತೀಫಿ,ಬೇಂಗಿಲ ಇವರ ಅದ್ಯಕ್ಷೀಯ ಭಾಷಣ ಮತ್ತು ಹಾಲಿ ಸಮಿತಿಯನ್ನು ಬರ್ಕಾಸು ಗೊಳಿಸಿ ನೂತನ ಸಮಿತಿಯ ರಚನೆ ನಡೆಯಿತು.
  

2017-18ರ ನೂತನ ಸಮಿತಿ ಅಸ್ತಿತ್ವಕ್ಕೆ

ನೂತನ ಸಾರಥಿಗಳು

ಗೌರಾವಧ್ಯಕ್ಷರು: ಡಿ.ಪಿ.ಯೂಸುಫ್ ಸಖಾಫಿ,ಬೈತಾರ್

ಸಲಹೆಗಾರರು: ಪಿ.ಕೆ.ಯಾಕುಬ್ ಮದನಿ,ಉರುವಾಲು ಪದವು

: ಅಬ್ದುಲ್ಲತೀಫ್,ಉರುವಾಲು ಪದವು

ಅದ್ಯಕ್ಷರು:
ಪಿ.ಕೆ.ದಾವೂದ್ ಸಅದಿ,ಉರುವಾಲು ಪದವು

ಉಪಾಧ್ಯಕ್ಷರು:
ಶರೀಫ್,ಉರುವಾಲು ಪದವು

ಪಿ.ಕೆ.ಎಂ.ಆಸಿಫ್,ಉರುವಾಲು ಪದವು

ಪ್ರ.ಕಾರ್ಯದರ್ಶಿ: ಸಂಶುದ್ದೀನ್ ಝುಹ್ರಿ,ಉರುವಾಲು ಪದವು

ಜೊತೆ,ಕಾರ್ಯದರ್ಶಿ
ನಾಸಿರ್.ಪಿ.ಉರುವಾಲು ಪದವು
ಪಿ.ಕೆ.ಸಿದ್ದೀಖ್,ಉರುವಾಲು ಪದವು

ಕೋಶಾಧಿಕಾರಿ: ಇಸ್ಹಾಖ್ ಮದನಿ,ಉರುವಾಲು ಪದವು

ಸಂಚಾಲಕರು: ಪಿ.ಕೆ.ಎಂ.ಹನೀಫ್,ಉರುವಾಲು ಪದವು

ಇದೇ ಸಂದರ್ಭದಲ್ಲಿ ಪ್ರವಾಸಿ ಜೀವನಕ್ಕೆಅಲ್ಪಾವದಿಯ ವಿರಾಮ ಹಾಕಿ ಊರಿಗೆ ತೆರಳುತ್ತಿರುವ ಸಮಿತಿಯ ಸಕ್ರೀಯ ಕಾರ್ಯಕರ್ತ   ಅಶ್ರಫ್ ಉರುವಾಲು ಪದವು ಹಾಗೂ ರಜಾ ಅವಧಿಯಲ್ಲಿ ಊರಿಗೆ ತೆರಳುತ್ತಿರುವ ನೂತನ ಸಮಿತಿ ಉಪಾಧ್ಯಕ್ಷರಾದ ಶರೀಫ್ ಉರುವಾಲು ಪದವು,ಸಕ್ರೀಯ ಕಾರ್ಯಕರ್ತ ಅಬ್ಬಾಸ್ ಉರುವಾಲು ಪದವು ಅವರನ್ನು  ಸಮಿತಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಇತ್ತೀಚೆಗೆ ಜಮಾಅತ್ತಿನಲ್ಲಿ ಮರಣ ಹೊಂದಿದ ಇರ್ವರ  ಮೇಲೆ ಮಯ್ಯಿತ್ ನಮಾಝ್ ಹಾಗೂ ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಇದೇ ಸಮಯ ನಡೆಯಿತು.

ನೂತನ ಸಮಿತಿಯ ಎಲ್ಲಾ ಸಾರಥಿಗಳಿಗೆ ಅಭಿನಂದನೆಗಳು

_uruval padavu development commity[UDC],riyad,saudi arabiya_

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.