ಎಸ್ ವೈ ಎಸ್ ಹರೇಕಳ ಸೆಂಟರ್ ಮಹಾಸಭೆ ಹರೇಕಳ ಸೆಂಟರ್ ಅಧ್ಯಕ್ಷರಾದ ಅಬ್ದುರ್ರಝ್ಝಾಖ್ ಆಲಡ್ಕ ರವರ ಅಧ್ಯಕ್ಷತೆಯಲ್ಲಿ ದೇರಿಕಟ್ಟೆಯ ಅಬೂಬಕರ್ ಸಿದ್ದೀಖ್ ಜಾಮಿಅಃ ಮಸ್ಜಿದ್ ಹಾಲ್ ನಲ್ಲಿ ನಡೆಯಿತು.
ದೇರಿಕಟ್ಟೆ ಮಸ್ಜಿದ್ ಇಮಾಮರಾದ ರಫೀಖ್ ಮದನಿ ರಾಜಗುಡ್ಡೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಹೈದರ್ ಸಖಾಫಿ ಇನೋಳಿ ಉದ್ಘಾಟಿಸಿದರು. ಬಳಿಕ ಎಸ್ ವೈ ಎಸ್ ಹರೇಕಳ ಸೆಂಟರ್ ಇದರ 2017-18 ನೇ ಸಾಲಿನ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ರಝ್ಝಾಖ್ ಆಲಡ್ಕ ಪುನರಾಯ್ಕೆಯಾದರು.
ಉಪಾಧ್ಯಕ್ಷರಾಗಿ ಹೈದರ್ ಸಖಾಫಿ ಇನೋಳಿ, ಉಸ್ಮಾನ್ ಫರೀದ್ ನಗರ, ಖಾಲಿದ್ ನ್ಯೂ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಕಾಸಿಂ ದೇರಿಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಮುಹಮ್ಮದ್ ಅಶ್ರಫ್ ಮುಸ್ಲಿಯಾರ್ ಕಡವಿನ ಬಳಿ, ಶಾಹುಲ್ ಹಮೀದ್ ಫರೀದ್ ನಗರ, ಅಬ್ದುಲ್ ಮಜೀದ್ ಫರೀದ್ ನಗರ,ಕೋಶಾಧಿಕಾರಿಯಾಗಿ ಹುಸೈನ್ ಟೈಲರ್ ಕಡವಿನ ಬಳಿ ಹಾಗು 22 ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅಶ್ರಫ್ ಕಿನಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಎಂ ಎ ಕೋಣಾಜೆ ಇದರ ಅಧ್ಯಕ್ಷರಾದ ಅಬ್ದುಲ್ ರಝ್ಝಾಖ್ ಹಾಜಿ ಮಲಾರ್, ಕರೀಂ ಹಾಜಿ ಉಂಬುದ, ದೇರಿಕಟ್ಟೆ ಬ್ರಾಂಚ್ ಅಧ್ಯಕ್ಷರಾದ ರಫೀಖ್ ಸಖಾಫಿ ದೇರಿಕಟ್ಟೆ, ಎ.ಎಸ್.ಜೆ.ಎಂ ದೇರಿಕಟ್ಟೆ ಮಸೀದಿ ಅಧ್ಯಕ್ಷರಾದ ಮುಹಮ್ಮದ್ ನವಾಝ್ ಹಾಗು ಸೆಂಟರ್ ಅಧೀನದ ಬ್ರಾಂಚುಗಳ ಕೌನ್ಸಿಲರುಗಳು ಉಪಸ್ಥಿತರಿದ್ದರು. ನೂತನ ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ ಫರೀದ್ ನಗರ ಧನ್ಯವಾದಗೈದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment