ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟ ಆಯೋಜಿಸಿದ ಲೋಕಾನುಗ್ರಹಿ ವಿಶ್ವ ವಿಮೋಚಕ ಪ್ರವಾದಿ ಮುಹಮ್ಮದ್ ಮುಸ್ತಫ ಸಲ್ಲಲ್ಲಾಹು ಅಲೈಹಿ ವಸಲ್ಲಮ ರವರ 1492 ನೇ ಜನ್ಮ ದಿನಾಚರಣೆ ಪ್ರಯುಕ್ತ ಬ್ರಹತ್ ಕಾಲ್ನಾಡಿಗೆ ಜಾಥಾ ಹಜ್ರತ್ ಅಚ್ಚಿ ಸಾಹಿಬ್ ವಲಿಯುಲ್ಲಾಹಿ ಖ.ಸಿ ಅಳೇಕಲ ದರ್ಗಾದಿಂದ ಮಂಚಿಲ ತೊಕ್ಕೋಟ್ಟು ಟಿ.ಸಿ ರೋಡು ಅಕ್ಕರಕರೆ ಮಾಸ್ತಿಕಟ್ಟೆ ಮೇಲಂಗಡಿ ಮಾರ್ಗವಾಗಿ ಉಳ್ಳಾಲ ದರ್ಗಾದಲ್ಲಿ ಸಮಾಪ್ತಿಗೊಂಡಿತು.
ಅಳೇಕಲ ಮಸೀದಿಯ ಖತೀಬರಾದ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದರು ದುಆ ನೆರೆವೇರಿಸಿದರು.
ಉಳ್ಳಾಲ ದರ್ಗಾ ಮಾಜಿ ಅಧ್ಯಕ್ಷರಾದ ಹಾಜಿ ಯು.ಎಸ್ ಹಂಝ ಅಳೇಕಲ ಅಧ್ಯಕ್ಷತೆ ವಹಿಸಿದ್ದರು.
ಪಟ್ಲ ಮಸೀದಿಯ ಖತೀಬರಾದ ಎಂ.ಸಿ ಮೋಙಂ ಫೈಝಿ ಉದ್ಘಾಟಿಸಿದರು.
ಸಯ್ಯದ್ ಮದನಿ ಮೊಹಲ್ಲಾ ಒಕ್ಕೂಟದ ಅಧ್ಯಕ್ಷ ಶಿಹಾಬುದ್ದೀನ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಳ್ಳಾಲದ 33ಮೊಹಲ್ಲಾದ ನಾಗರಿಕರು 15 ಮದ್ರಸ ದ ವಿದ್ಯಾರ್ಥಿಗಳು, ಅದ್ಯಾಪಕರು ಹಲವಾರು ಗಣ್ಯ ವ್ಯಕ್ತಿಗಳು, ಉಳ್ಳಾಲ ಪುರಸಬೆಯ ಮಾಜಿ ಅಧ್ಯಕ್ಷ ಯು.ಎ ಇಸ್ಮಾಯಿಲ್, ಉಳ್ಳಾಲ ನಗರ ಸಬೆಯ ಸದಸ್ಯರಾದ ಅಶ್ರಫ್ ಬಾವ , ಇಬ್ರಾಹಿಂ ಶೌಕತ್ , ಮೊಹಲ್ಲಾ ಒಕ್ಕೂಟದ ಪ್ರ.ಕಾರ್ಯದರ್ಶಿ ಹಮೀದ್ ಮಂಚಿಲ, ಅಳೇಕಲ ಮಸೀದಿಯ ಪ್ರ.ಕಾರ್ಯದರ್ಸಿ ಅಶ್ರಫ್ ಯು.ಡಿ, ಪಟ್ಲ ಮಸೀದಿಯ ಅಧ್ಯಕ್ಷರಾದ ಮಹಮೂದ್ ಹಾಜಿ, ಉಳ್ಳಾಲ ದರ್ಗಾ ಸಮಿತಿ ಸದಸ್ಯರಾದ ಹನೀಫ್ ಹಾಜಿ ಮಾರ್ಗತಲೆ, ಶರೀಫ್ ಅಳೇಕಲ, ಔದಿ ಕೋಡಿ, ಮಾರ್ಗತಲೆ ಮಸೀದಿಯ ಪ್ರ.ಕಾರ್ಯದರ್ಶಿ ಯು.ಕೆ ಕಾದರ್, ಮಂಚಿಲ ಮಸೀದಿಯ ಅಧ್ಯಕ್ಷ ಮಕ್ಸೂದ್, ದ.ಕ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಸದಸ್ಯ ಅಲ್ತಾಫ್ ಕುಂಪಲ, ಪಟ್ಲ ಮಸೀದಿಯ ಪ್ರ.ಕಾರ್ಯದರ್ಶಿ ಸದ್ದಾಂ, ದಾರಂದಬಾಗಿಲು ಅದ್ಯಕ್ಷ ಮುಸ್ತಫ ಮುಂಡೋಲಿ., ಪ್ರ.ಕಾರ್ಯದರ್ಶಿ ಮಂಸೂರ್, ಹಳೆಕೋಟೆಯ ತಾಜುಲ್ ಉಲಮಾ ಮದ್ರಸದ ಅಧ್ಯಕ್ಷರಾದ ಯೂಸುಫ್ ಹಳೆಕೋಟೆ, ಸುಂದರಿಬಾಗ್ ಮಸೀದಿಯ ಅಧ್ಯಕ್ಷ ಆಸಿಫ್, ಪ್ರ.ಕಾರ್ಯದರ್ಶಿ ಹಂಝ, ಸಯ್ಯಿದ್ ಮದನಿ ಸುನ್ನೀ ಜಂ ಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ಅಧ್ಯಕ್ಷ ಹಾಫಿಲ್ ಹಸನ್ ಮುಬಾರಕ್ ಸಖಾಫಿ, ತಾಜುಲ್ ಉಲಮಾ ಮದ್ರಸ ಹಳೆಕೋಟೆ ಇದರ ಸಂಚಾಲಕ ಸತ್ತಾರ್ ಹಳೆಕೋಟೆ, ಪಿಲಾರ್ ಮಸೀದಿಯ ಪ್ರಧಾನ ಕಾರ್ಯದರ್ಶಿ ನಝ್ರತ್ ಚೊಂಬುಗುಡ್ಡೆ, ಸಯ್ಯದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಜಮಾಲ್ ಮುಸ್ಲಿಯಾರ್, ತೋಟ ಮಸೀದಿಯ ಅಧ್ಯಕ್ಷ ಇಬ್ರಾಹಿಂ, ಪ್ರ.ಕಾರ್ಯದರ್ಶಿ ಅತೀಕ್, ಮುಕ್ಕಚೇರಿ ಮಸೀದಿಯ ಕಾರ್ಯದರ್ಶಿ ಅಸ್ಗರ್, ಆಜಾದ್ ನಗರ ಮಸೀದಿಯ ಉಪಾದ್ಯಕ್ಶ ರಫೀಕ್ ಬಾಗವಹಿಸಿದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment