ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಎಸ್ಎಫ್ ಬಂಟ್ವಾಳ ಡಿವಿಜನ್ ವಾರ್ಷಿಕ ಕೌನ್ಸಿಲ್ ಇತ್ತೀಚೆಗೆ ಬಿ.ಸಿ ರೋಡಿನ ಎಸ್ಸೆಸ್ಸಫ್ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಬಹುಮಾನ್ಯರಾದ ಸಿದ್ದಿಕ್ ಸಅದಿ ಉಸ್ತಾದರು ದುವಾಗೈದು, ಡಿವಿಷನ್ ಪ್ರಧಾನ ಕಾರ್ಯದರ್ಶಿ ಆಬಿದ್ ನಈಮಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ ನೆರವೇರಿಸಿದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಶೀದ್ ವಗ್ಗ, ಪ್ರಧಾನ ಕಾರ್ಯದರ್ಶಿಯಾಗಿ ಆಬಿದ್ ನಈಮಿ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮೌಸೂಫ್ ಅಬ್ದುಲ್ಲ, ಉಪಾಧ್ಯಕ್ಷರಾಗಿ ಅಕ್ಬರ್ ಅಲಿ ಮದನಿ ಹಾಗೂ ಸಿದ್ದೀಕ್ ಸಅದಿ, ಜತೆ ಕಾರ್ಯದರ್ಶಿಯಾಗಿ ಹಾರಿಸ್ ಪೆರಿಯಪಾದೆ ಹಾಗೂ ಇರ್ಶಾದ್ ಗೂಡಿಬಳಿ ಇವರನ್ನು ಪುನರಾಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ರಫೀಖ್ ಝುಹುರಿ ಮಂಚಿ ಆಯ್ಕೆಯಾದರು.
ವೀಕ್ಷಕರಾಗಿ ಜಿಲ್ಲಾ ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ ಆಗಮಿಸಿದರು. ಕೊನೆಯಲ್ಲಿ ದನ್ಯವಾದ ಸಮರ್ಪಿಸಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
*✍🏻ಹಾರಿಸ್ ಪೆರಿಯಪಾದೆ*
Comments
Post a Comment