ಖುವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ 2018 - 2019 ನೇ ಸಾಲಿನ ಮದ್ರಸ ಪ್ರಾರಂಭೋತ್ಸವ ಹಾಗು ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ
ಖುವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ 2018 - 2019 ನೇ ಸಾಲಿನ ಮದ್ರಸ ಪ್ರಾರಂಭೋತ್ಸವ ಹಾಗು ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ ಕಲ್ಲಾಪು ಪಟ್ಲದ ಮದ್ರಸ ಹಾಲ್ ನಲ್ಲಿ ನಡೆಯಿತು.
ತಖ್ವಾ ಜುಮಾ ಮಸೀದಿ ಪಟ್ಲ ಅಧ್ಯಕ್ಷರಾದ ಮಹಮೂದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಮದ್ರಸ ಪ್ರಾರಂಭೋತ್ಸವವನ್ನು ಕಲ್ಲಾಪುವಿನ ಸಮಾಜ ಸ್ನೇಹಿಯೋರ್ವರ ಸಂಪೂರ್ಣ ಸಹಕಾರದೊಂದಿಗೆ ಮನೆ ಮನೆಗೆ ಸಸಿ ವಿತರಿಸುವ ಮೂಲಕ ವೈವಿಧ್ಯಮಯ ರೀತಿಯಲ್ಲಿ ಆಚರಿಸಲಾಯಿತು. ಅರಿವಿನಂಗಳಕ್ಕೆ ಮನುಕುಲವನ್ನು ನಡೆಸಿದ ಪ್ರವಾದಿ ಮುಹಮ್ಮದ್ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮರ ದೇವಸಂದೇಶದ ಮೂಲಕ ಸಂಸ್ಥಾಪಿತಗೊಂಡ ಪವಿತ್ರ ಇಸ್ಲಾಂ ಎಂಬ ಶಾಂತಿಯ ಜೀವನದರ್ಶನಗಳ ಆರಂಭದ ಹೆಜ್ಜೆ ಮದ್ರಸಾಗಳು ಆಗಿದೆ. ಅದರತ್ತ ಕಣ್ಣೋಟ ಹರಿಸುವಾಗ ಆಧುನಿಕ ಮದ್ರಸಾ ರಂಗದ ಸ್ಫಷ್ಟ ರಚನಾಕಾರ ಸಂಸ್ಥಾಪಕ ಮರ್ಹೂಂ ನೂರುಲ್ ಉಲಮಾ ಎಂ.ಎ. ಅಬ್ದುಲ್ ಖಾದಿರ್ ಮುಸ್ಲಿಯಾರ್ ನಮ್ಮ ನಡುವೆ ಶತಾಯುಷಿಯಾಗಿ ಬಾಳೀ ವಫಾತಾದ ವಿದ್ವಾಂಸ ಗುರು ಸದಾಕಾಲವು ಚಿರಸ್ಮರಣೀಯರು. ಬಹಳ ವರ್ಷಗಳ ಹಿಂದೆ ಊರು ಕೇರಿಗಳಿಗೆ ಪಾದಯಾತ್ರೆ ಮಾಡಿ ಅರೆಹೊಟ್ಟೆಯಲ್ಲಿ ಸಾಗಿ ಮದ್ರಸ ಸಂಸ್ಥಾಪನೆಯ ಸಂದೇಶ ಮುಟ್ಟಿಸಿ ಪ್ರಾಯೋಗಿಕತೆಗೆ ತಂದ ಮದ್ರಸಾ ಪ್ರಸ್ಥಾನ ಇಂದು ಬೆಳೆದು ಹೆಮ್ಮರವಾಗಿ ತಲೆಮಾರಿಗೆ ದೀನೀ ಅರಿವಿನ ನೆರಳನ್ನು ನೀಡುತ್ತಿದೆ. ಅದರ ಪ್ರತಿಫಲದಲ್ಲೊಂದು ಅಂಶ ಎಂ.ಎ.ಉಸ್ತಾದರ ಆತ್ಮಕ್ಕೆ ನಿತ್ಯ ನಿರಂತರ ಸಾಗುತಿದೆ ಎಂದು ಮದ್ರಸ ಅಧ್ಯಾಪಕರಾದ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ತಿಳಿಸಿದರು. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಲ ಜುಮಾ ಮಸೀದಿ ಮುದರ್ರಿಸರಾದ ಅಬೂ ಮುಖ್ತಾರ್ ಅಶ್ರಫ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಸ್ಥ, ಸುದ್ರಢ ಸಮಾಜ ನಿರ್ಮಾಣಕ್ಕೆ ಧಾರ್ಮಿಕ ಅರಿವು ಅನಿವಾರ್ಯ ಎಂದು ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಕೇಂದ್ರ ಸಮಿತಿ ಸದಸ್ಯರಾದ ಮೊಯ್ದಿನ್, ಪಟ್ಲ ಮಸೀದಿ ಉಪಾಧ್ಯಕ್ಷರಾದ ಹಾರಿಸ್, ಪ್ರಧಾನ ಕಾರ್ಯದರ್ಶಿ ಸದ್ದಾಂ ಕಲ್ಲಾಪು, ಮದ್ರಸ ಅಧ್ಯಾಪಕರಾದ ಶಾಫಿ ಸಖಾಫಿ ಹಾಗು ಮದ್ರಸ ವಿದ್ಯಾರ್ಥಿಗಳು, ಪೋಷಕರು, ಊರ ಬಾಂಧವರು ಉಪಸ್ಥಿತರಿದ್ದರು. ಮದ್ರಸ ಮುಖ್ಯೋಪಾಧ್ಯಾಯರಾದ ಮುನೀರ್ ಲತೀಫಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Comments
Post a Comment