ಕರ್ನಾಟಕ ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕು ಇದರ ಆಶ್ರಯದಲ್ಲಿ ಸಖಾಫೀಸ್ ಜಲ್ಸಾ ಕಾರ್ಯಕ್ರಮ ಪಡೀಲಿನ ಇಲ್ಮ್ ಸೆಂಟರಿನಲ್ಲಿ ನಡೆಯಿತು.
ತಾಲೂಕು ಸಖಾಫಿ ಕೌನ್ಸಿಲ್ ನ ಅಧ್ಯಕ್ಷರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ಸಖಾಫಿ ಕೌನ್ಸಿಲ್ ಅಧ್ಯಕ್ಷರಾದ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ನ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಎಸ್ ವೈ ಎಸ್ ಅಧ್ಯಕ್ಷರಾದ ಜಿ. ಎಂ ಮುಹಮ್ಮದ್ ಕಾಮಿಲ್ ಸಖಾಫಿ ಮುಖ್ಯ ತರಗತಿ ನಡೆಸಿದರು. ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯಃ ಪ್ರಾಸ್ತಾವಿಕವಾಗಿ ಮಾತನಾಡಿದರು. ತದ ನಂತರ ನಮ್ಮಿಂದ ಕಣ್ಮರೆಯಾದ ಪ್ರಮುಖ ವಿದ್ವಾಂಸರು, ಸಮಸ್ತ ಉಪಾಧ್ಯಕ್ಷರು, ಸಅದಿಯಾ ಪ್ರಾಂಶುಪಾಲರು ಆಗಿದ್ದ ನಿಬ್ರಾಸುಲ್ ಉಲಮಾ ಶೈಖುನಾ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ( ಎ.ಕೆ ಉಸ್ತಾದ್ ) ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣಾ ಕಾರ್ಯಕ್ರಮ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಸಖಾಫಿಗಳು ಉಪಸ್ಥಿತರಿದ್ದರು. ತಾಲೂಕು ಸಖಾಫಿ ಕೌನ್ಸಿಲ್ ಇದರ ಪ್ರಧಾನ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಸ್ವಾಗತಿಸಿ ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್ ಪದವು ಕಾರ್ಯಕ್ರಮ ನಿರೂಪಿಸಿದರು.
Comments
Post a Comment