ಎಸ್ ವೈ ಎಸ್ ಮಲಾರ್ ಬ್ರಾಂಚ್ ವತಿಯಿಂದ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮ ಮಲಾರ್ ಬದ್ರಿಯಾ ನಗರದಲ್ಲಿ ಇತ್ತೀಚೆಗೆ ನಡೆಯಿತು. ಅಬ್ದುಲ್ ಅಝೀಝ್ ಮದನಿ ಮಲಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುರ್ರಶೀದ್ ಸಅದಿ ಮುಖ್ಯ ಪ್ರಭಾಷಣ ನಡೆಸಿದರು. ಕಾರ್ಯಕ್ರಮದಲ್ಲಿ ಅಬ್ದುಲ್ ಅಝೀಝ್ ಹಿಮಮಿ, ಹೈದರ್ ಹಿಮಮಿ, ಅಬ್ದುಲ್ ಹಕೀಂ ಸಖಾಫಿ, ಎಸ್ ವೈ ಎಸ್ ಮಲಾರ್ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಗು ಕೋಶಾಧಿಕಾರಿ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು.