ಮುಕ್ಕಚ್ಚೇರಿ ಮದ್ರಸಾದಲ್ಲಿ ಮದನಿ ಮೌಲಿದ್ ಮತ್ತು ತಾಜುಲ್ ಉಲಮಾ ಅನುಸ್ಮರಣೆ
ಉಳ್ಳಾಲ : ಇಲ್ಲಿನ ಅಲ್ ಮದ್ರಸತುಲ್ ಮುಬಾರಕ್ ಮುಕ್ಕಚ್ಚೇರಿ ವತಿಯಿಂದ ಮಾಸಂಪ್ರತಿ ನಡೆಸುವ ಮದನಿ ಮೌಲಿದ್ ಮತ್ತು ಮಹಾನ್ ವಿದ್ವತ್ಪ್ರತಿಭೆ,ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಉಳ್ಳಾಲ ತಂಙಳ್ ರವರ ಅನುಸ್ಮರಣಾ ಕಾರ್ಯಕ್ರಮ ನಡೆಯಿತು.ಮದ್ರಸದ ಮುಖ್ಯೋಪಾಧ್ಯಾಯ ಎಂ.ಎ.ಇಸ್ಮಾಈಲ್ ನಈಮಿ ಮಂಗಳಪೇಟೆ ಅನುಸ್ಮರಣಾ ಭಾಷಣ ಮಾಡಿದರು.
ಕಳೆದ ವರ್ಷ ಪಬ್ಲಿಕ್ ಪರೀಕ್ಷೆಯಲ್ಲಿ ಪಾಸಾದ ಐದು,ಏಳು ಮತ್ತು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವನ್ನು ನೀಡಲಾಯಿತು.
ಅಧ್ಯಾಪಕರಾದ ಅಬ್ಬಾಸ್ ಮದನಿ ಅಳೇಕಲ ದುಆ ನೆರವೇರಿಸಿದರು. ಮುಕ್ಕಚ್ಚೇರಿ ಜುಮಾ ಮಸೀದಿ ಉಪಾಧ್ಯಕ್ಷ ಯು.ಡಿ.ಮುಹಮ್ಮದ್ ಹಾಜಿ, ಮಾಜಿ ಅಧ್ಯಕ್ಷ ಕೋಯಾ ಹಾಜಿ.ಪ್ರಧಾನ ಕಾರ್ಯದರ್ಶಿ ಹೈದರ್ ಮುಕ್ಕಚ್ಚೇರಿ,ಅಧ್ಯಾಪಕರಾದ ಅಬ್ದುಲ್ ಅಝೀಝ್ ಮದನಿ ಮಲಾರ್, ಹಂಝ ಮದನಿ ಹಳೆಕೋಟೆ,ಕರೀಮ್ ಮುಸ್ಲಿಯಾರ್ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು.
Comments
Post a Comment