ಬೆಂಗಳೂರು:ಕಾಶ್ಮೀರದ ಪುಲ್ವಾಮದಲ್ಲಿ 42 ಸೈನಿಕರ ಕಗ್ಗೊಲೆಗೈದ ರಾಕ್ಷಸರನ್ನು ಶೀಘ್ರದಲ್ಲಿ ಪತ್ತೆಹಚ್ಚಿ ನೇಣುಗಂಬಕ್ಕೇರಿಸುವ ಕೆಲಸಕ್ಕೆ ಸರ್ಕಾರ ಮುಂದಾಗಬೇಕು. ಇಡೀ ಭಾರತೀಯರನ್ನು ಆತಂಕ ಮತ್ತು ದುಖಃಕ್ಕೀಡು ಮಾಡಿದ ಪುಲ್ವಾಮ ಘಟನೆಯು ಜಾಗತಿಕ ರಾಕ್ಷಸಿತನದ ಪರಮಾವಧಿಯಾಗಿದೆ. ೪೨ ಸೈನಿಕರ ಕುಟುಂಬಕ್ಕೆ ಸಾಂತ್ವನ ಮಾತ್ರವಲ್ಲ ಅವರ ಎಲ್ಲಾ ಖರ್ಚುವೆಚ್ಚಗಳನ್ನು ಭರಿಸಿ ಸೈನಿಕರಿಗೆ ಸ್ಪೂರ್ತಿಯಾಗುವ ಕೆಲಸ ಅಧಿಕೃತರಿಂದ ನಡೆಯಬೇಕು. ಜಾಗತಿಕ ಮಟ್ಟದಲ್ಲಿ ಮನುಷ್ಯ ರಾಶಿಯನ್ನು ಕೊಂದು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುವ ಮತ್ತು ಗಟ್ಟಿಗೊಳಿಸುವ ರಾಜಕೀಯ ಪ್ರೇರಿತ ಉಗ್ರವಾದಿಗಳಿಗೆ ಸರಿಯಾದ ಪಾಠವಾಗಬೇಕಾದರೆ ಪುಲ್ವಾಮ ಘಟನೆಯ ಸರಿಯಾದ ತನಿಖೆ ಪ್ರಾಮಾಣಿಕತೆಯಿಂದಿರಬೇಕು. ಸೈನಿಕರ ಕಗ್ಗೊಲೆಯ ಹಿಂದೆ ಯಾವ ಕರಾಳ ಹಸ್ತವಿದ್ದರೂ ಅವರನ್ನು ಬಹಿರಂಗವಾಗಿ ಶಿಕ್ಷಿಸುವ ಆಸೆಯನ್ನು 130 ಕೋಟಿ ಭಾರತೀಯರು ಇಟ್ಟುಕೊಂಡಿದ್ದಾರೆ. ಅಕ್ರಮಿಗಳು ಎಷ್ಟೇ ಪ್ರಭಾವಿಗಳು ಅಥವಾ ಪ್ರಬಲ ರಾಷ್ಟ್ರದವರಾಗಿದ್ದರೂ ಅವರ ವಿರುದ್ಧ ಗರಿಷ್ಟ ಶಿಕ್ಷೆಯಾಗಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
