Skip to main content

4000 Covid ರೋಗಿಗಳ ಮಧ್ಯೆ ಸೇವಾನಿರತ ನಮ್ಮೋರ್ವ ಕಾರ್ಯಕರ್ತ


4000 Covid ರೋಗಿಗಳ ಮಧ್ಯೆ ಸೇವಾನಿರತ ನಮ್ಮೋರ್ವ ಕಾರ್ಯಕರ್ತ

ಜಗತ್ತಿನಾದ್ಯಂತ ಹರಡಿರುವ ಕೋವಿಡ್ 19, ಲಕ್ಷಾಂತರ ಜನರನ್ನು ಬಲಿಪಡೆದಿದೆ. ಇದರಲ್ಲಿ ಸರಿಸುಮಾರು 4000 ಕ್ಕಿಂತಲೂ ಅಧಿಕ ರೋಗಿಗಳು ಕುವೈತ್ ನಲ್ಲೂ ಇದ್ದಾರೆ.  ಕುವೈತ್ ನ  ಆಸ್ಪತ್ರೆಗಳು  ಪ್ರತಿನಿಮಿಷ ಬಹಳ ಎಚ್ಚರದಿಂದಲೇ ದಿನದ 24 ಗಂಟೆಗಳು ರೋಗಿಗಳ ಸೇವೆಯಲ್ಲೇ ತೊಡಗಿದೆ.
ಅದರಲ್ಲೂ ನಮ್ಮ ಉಳ್ಳಾಲದ ಬಶೀರ್ ರವರ ಸೇವೆ ಶ್ಲಾಘನೀಯ.


ಸೆಯ್ಯಿದ್ ಕುಂಬೋಳ್ ತಂಗಳ್ ರವರ ಆಶೀರ್ವಾದ ಪಡೆದು ಕುವೈತ್ ಆಸ್ಪತ್ರೆಯಲ್ಲಿ OT Anaesthesia Technician ಸೇವೆಯಲ್ಲಿರುವ ಬಶೀರ್ ರವರು ಇದೀಗ ತನ್ನ 24 ಗಂಟೆಗಳೂ ಕೋರೋಣ ಭಾದಿತರ ಮಧ್ಯೆ ಇದ್ದು ಅವರ ಶುಶ್ರೂಷೆಯಲ್ಲೇ ದಿನ ಕಳೆಯುತ್ತಿದ್ದಾರೆ. 
ಬಿಡುವಿಲ್ಲದ 24 ಗಂಟೆಯೂ ಸೇವೆ. ಕೋವಿಡ್ ರಕ್ಷಣಾ ವಸ್ತ್ರ ಧರಿಸಿಯೇ ದಿನದ ಐದು ವಕ್ತ್ ಖಳಾ ಆಗದಂತೆ ನಮಾಜ್ ನಿರ್ವಹಣೆ,  ರಂಜಾನ್ ಉಪವಾಸ,ಸಹರಿ, ಇಫ್ತಾರ್,ತರಾವೀಹ್ ಇವೆಲ್ಲಾ ಇಬಾದತ್ ಗೆ ಒಂದೂ ನಷ್ಟವಾಗದೆ ಸಮಯ ಕಂಡುಕೊಳ್ಳಲು ಹರಸಾಹಸ ಪಡುತ್ತಿರುವುದಾಗಿ ಅವರ ಮಾತಿನಿಂದ ತಿಳಿಯಲಾಯಿತು.
ಅಷ್ಟಕ್ಕೂ ಅವರು ಅಲ್ಲಾಹನ ಮೇಲಿನ ತವಕ್ಕುಲ್, ಮಹಾತ್ಮರ ರಕ್ಷಣೆಯ ಭರವಸೆ, ಕಾರ್ಯಕರ್ತರ ದುಆದ ನಿರೀಕ್ಷೆಯಲ್ಲಿ ಧೈರ್ಯದಿಂದ ಮುನ್ನಡೆಯುತ್ತಿದ್ದಾರೆ.

ನಾಡಿನಲ್ಲಿ ಸುನ್ನತ್ ಜಮಾಹತ್ ಗಾಗಿ ಹಲವು ಕಾರ್ಯಗಳಲ್ಲಿ ತನ್ನ ಸಹಕಾರ ಮತ್ತು ಸಾನಿಧ್ಯ ಕೊಡುತ್ತಾ, ಕಳೆದ ಸಾಲಿನ ಉಳ್ಳಾಲ ದರ್ಗಾದ ಅರೇಬಿಕ್ ಟ್ರೆಸ್ಟ್ ಜೊತೆಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ನಮ್ಮ ಬಶೀರ್ ರವರಿಗೆ ನಾವೆಲ್ಲರೂ ದುಆ ಮಾಡಬೇಕಾಗಿದೆ.

ಅಲ್ಲಾಹನು ಅವರಿಗೂ ನಮಗೂ ವೈರಸ್ ನಿಂದ ಸಂಪೂರ್ಣ ರಕ್ಷಣೆ ನೀಡಲಿ,ಅವರ ಅಹೋರಾತ್ರಿಯ ಸೇವೆಗೆ ಅಲ್ಲಾಹು ತಕ್ಕ ಪ್ರತಿಫಲ ಕರುಣಿಸಲಿ. ಅಹ್ಲುಸ್ಸುನ್ನತ್ ಗಾಗಿ ಇನ್ನೂ ಶ್ರಮವಹಿಸಲು ಬೇಕಾದ ದೀರ್ಘ ಆಯುಷ್ಯ ಆರೋಗ್ಯ ಐಶ್ವರ್ಯ ಅಲ್ಲಾಹನು ನಮಗೆಲ್ಲರಿಗೂ ಕರುಣಿಸಲಿ -ಆಮೀನ್.
✍️Musthafa Master

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.