ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ವತಿಯಿಂದ ಮಂಗಳೂರು ತಾಲೂಕು ಸಖಾಫಿ ಸಂಗಮ ಪಡೀಲಿನ ಎಸ್ ಇ ಡಿ ಸಿ ಆಡಿಟೋರಿಯಂನಲ್ಲಿ ಜರುಗಿತು.
ಅಲ್ ಮದೀನ ಮಂಜನಾಡಿ ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಅಶ್ ಅರಿಯ್ಸಃ ಮುಹಮ್ಮದ್ ಅಲಿ ಸಖಾಫಿ ಸುರಿಬೈಲು ವಿಷಯ ಮಂಡನೆ ಮಾಡಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದ್ ಹಾಗು ಅವರು ಮುನ್ನಡೆಸುತ್ತಿರುವ ಸಂಸ್ಥೆಗಳೊಂದಿಗಿನ ಅಭೇದ್ಯವಾದ ಸಂಬಂಧಗಳ ಕುರಿತು ವಿವರಿಸಿ, ಮುಂದಿನ ಮಾರ್ಚ್ 23 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಸಂಪೂರ್ಣ ಮಹಾ ಸಖಾಫಿ ಸಂಗಮಕ್ಕೆ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ತಾಲೂಕು ಸಖಾಫಿ ಕೌನ್ಸಿಲ್ ಅಧ್ಯಕ್ಷರಾದ ಶಿಹಾಬುದ್ದೀನ್ ಅಶ್ರಫಿ ಕಾಮಿಲ್ ಸಖಾಫಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಕೆ ಕೆ ಎಂ ಕಾಮಿಲ್ ಸಖಾಫಿ ಹಾಗು ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ಜಿಲ್ಲಾಧ್ಯಕ್ಷರಾದ ಅಬ್ದುಲ್ ಅಝೀಝ್ ಸಖಾಫಿ ಕೊಳ್ತಿಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ಇದರ ನೂತನಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಹಾಗು ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಕಾರ್ಯಕಾರಿ ಸಮಿತಿ ಸದಸ್ಯರಾದ ನವಾಝ್ ಸಖಾಫಿ ಅಡ್ಯಾರ್ ಪದವು ಇವರಿಗೆ ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದಿಸಿ ಗೌರವಿಸಲಾಯಿತು.
ಪ್ರಸ್ತುತ ಸಂಗಮದಲ್ಲಿ ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕು ಮಾಜಿ ಅಧ್ಯಕ್ಷರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ, ಸಖಾಫಿ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಉಸ್ಮಾನ್ ಸಖಾಫಿ ಕಣ್ಣೂರು, ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ, ಸಖಾಫಿ ಕೌನ್ಸಿಲ್ ಮಂಗಳೂರು ಕೋಶಾಧಿಕಾರಿ ರಫೀಕ್ ಮದನಿ ಕಾಮಿಲ್ ಸಖಾಫಿ, ದ.ಕ ಜಿಲ್ಲಾ ಸಖಾಫಿ ಕೌನ್ಸಿಲ್ ನಾಯಕರಾದ ಪೂಡಲ್ ಮುಹಮ್ಮದ್ ಸಖಾಫಿ, ಅಶ್ರಫ್ ಸಖಾಫಿ ಕಿನ್ಯ, ಪ್ರಚಾರ ಸಮಿತಿ ಜನರಲ್ ಕನ್ವೀನರ್ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಹಾಗು ಮಂಗಳೂರು ತಾಲೂಕು ವ್ಯಾಪ್ತಿಯ ಸಖಾಫಿ ವಿದ್ವಾಂಸರು ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ಪ್ರಚಾರ ಸಮಿತಿ ಚೆಯರ್ಮಾನ್ ಫಾರೂಕ್ ಸಖಾಫಿ ಮದನಿ ನಗರ ಧನ್ಯವಾದಗೈದರು.





















Comments
Post a Comment