Skip to main content

SBS ಮದನಿ ನಗರ.ಕುತ್ತಾರು 28


ಅಲ್ ಮದ್ರಸತುಲ್ ಸಯ್ಯಿದ್ ಮದನಿ 3ನೆ ಅಡ್ಡ ರಸ್ತೆ ಮದನಿ ನಗರ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಬಾಲ ಸಂಘ ಎಂಬ ಮದ್ರಸಾ ಮಕ್ಕಳ ಸಂಘಟನೆ ಆಗಿದೆ SBS. ಕಳೆದ ಐದಾರು ವರ್ಷಗಳಿಂದ ಅದು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ

ಎಲ್ಲಾ ತಿಂಗಳಲ್ಲಿ ಸ್ಪರ್ದೆ ನಡೆಸಿ ಅದರಲ್ಲಿ ಪ್ರಥಮ ಸ್ಥಾನ ಪಡೆದವರಿಗೆ SBS ಗ್ರಾಂಡ್ ಫೈನಲ್ (SBS ವಾರ್ಷಿಕ) ಕಾರ್ಯಕ್ರಮ ನಡೆಯುತ್ತದೆ.
2022 ನೆ ಸಾಲಿನ ಗ್ರಾಂಡ್ ಫೈನಲ್ ಕಾರ್ಯಕ್ರಮವು ಮಾರ್ಚ್ 28 ರಂದು ಅತ್ಯಂತ  ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೇಕ್ ಹಸನ್ ರಾಝೀ ವಹಿಸಿದ್ದರು.
ಪ್ರದಾನ ಕಾರ್ಯದರ್ಶಿ ಅಬೂಬಕ್ಕರ್ ಅಬ್ದುಲ್ ಫಸ್ರೀನ್ ಸ್ವಾಗತಿಸಿದರು. 

ಗ್ರಾಂಡ್ ಫೈನಲ್ ಪ್ರಯುಕ್ತ ಸಾಹಿಲ್ ಮುಸ್ಲಿಯಾರ್ ಮದನಿ ನಗರ ಹಾಗೂ ಸಂಗಡಿಗರಿಂದ ಬ್ರಹತ್ ಬುರ್ಧಾ ಮಜ್ಲಿಸ್ ನಡೆಯಿತು.
2022 ನೆ ಸಾಲಿನಲ್ಲಿ 3 ಮಂದಿಯನ್ನು ಸ್ಟಾರ್ ಗಳಾಗಿ ಗುರುತಿಸಲಾಯಿತು 
ಪ್ರಥಮ ಸ್ಟಾರ್ ಆಯಿಶಾ ಮಾಳುಫಾ/ಶರೀಫ್ ದ್ವಿತೀಯ ಸ್ಟಾರ್ ಮರಿಯಂ ಝುಲ್ಫಾ / ಶಮೀರ್ ತೃತೀಯ ಸ್ಟಾರ್ ಮರ್ಯಮ್ ಸುರೂರಾ/ಹನೀಫ್ ಮುಸ್ಲಿಯಾರ್ ಈ ಮೂರು ಮಂದಿ ಸ್ಟಾರ್ ಗಳಿಗೆ ಬಂಗಾರದ ಪದಕ ನೀಡಿ ಗೌರವಿಸಲಾಯಿತು.
2022 ನೆ ಸಾಲಿನ ವ್ಯಕ್ತಿ ಕಲಾ ಪ್ರತಿಭೆಗಳಾಗಿ ಸೀನಿಯರ್ ವಿಭಾಗದಲ್ಲಿ ಇನಾಝ್ ಬಾನು/ಇಸ್ಮಾಯಿಲ್ ಜೂನಿಯರ್ ವಿಭಾಗದಲ್ಲಿ ಆಫ್ರಾ/ಮುಹುಯುದ್ದಿನ್ ಕುಕ್ಕುದಕಟ್ಟೆ ಸಬ್ ಜೂನಿಯರ್ ವಿಭಾಗದಲ್ಲಿ ಅಬ್ದುಲ್ಲಾತೀಫ್ ಮೇಹರಾನ್ ಅಲಿ/ಮುಹಮ್ಮದ್ ಅಲಿ ಇವರು ಪಡೆದರು.

 ಅದೇ ರೀತಿ ಪ್ರಥಮ ದ್ವಿತೀಯ ಸ್ಥಾನ ಪಡೆದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸಯ್ಯಿದ್ ಜಲಾಲುದ್ದೀನ್ ಜಮಲುಲೈಲಿ ತಂಞಳ್ ಮಲಪ್ಪುರಂ ಕೇರಳ ಇವರು ದುಆ ಕ್ಕೆ ನೇತೃತ್ವ ನೀಡಿದರು.
ಮದ್ರಸಾ ಅಧ್ಯಕ್ಷ ಇಸ್ಮಾಯಿಲ್ SA, ಪ್ರದಾನ ಕಾರ್ಯದರ್ಶಿ ಪುತ್ತುಬಾವಾಕ, ಕೋಶಾಧಿಕಾರಿ ಮುಸ್ತಫ, SYS ಮದನಿ ನಗರ ಅಧ್ಯಕ್ಷ IMK ಇಸ್ಮಾಯಿಲ್ ಮದನಿ ಆಶಂಸ ಭಾಷಣ ಮಾಡಿದರು
ಕಾರ್ಯಕ್ರಮದ ಕೊನೆಯಲ್ಲಿ 
SYS ಮಾಸಿಕ ಜಲಾಲಿಯಾ ಮಜ್ಲಿಸ್ ನಡೆಯಿತು.
SBS ಡೈರೆಕ್ಟರ್ ಅಯ್ಯೂಬ್ ಮಹ್ಳರೀ ಉಸ್ತಾದ್ ಕಾವಳಕಟ್ಟೆ  ಹಾಗೂ ಕೋಶಾಧಿಕಾರಿ ಝೈದ್ ‌ಅಫೀಫ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ವೀಡಿಯೋ ಈ ಕೆಳಗಿನ 2 ಲಿಂಕ್ ಗಳಲ್ಲಿ ಇದೆ. 

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.