Skip to main content

Posts

Showing posts from 2025

ಎಸ್. ವೈ. ಎಸ್ ಉಪ್ಪಿನಂಗಡಿ ಝೋನ್ ವತಿಯಿಂದ ಜಮಾಅತ್ ಪ್ರತಿನಿಧಿ ಸಂಗಮ.ಮದುವೆಯ ದುಂದುವೆಚ್ಚದಿಂದ ದೂರವಿರಿ - ಯಾಕೂಬ್ ಸಅದಿ ನಾವೂರು.

ರಾಜ್ಯದ ಅತೀ ದೊಡ್ಡ ಸುನ್ನೀ ಯುವಜನ ಸಂಘಟನೆಯಾದ  ಎಸ್ ವೈ ಎಸ್ ಇದರ ಉಪ್ಪಿನಂಗಡಿ ಝೋನ್ ಸಮಿತಿ ವತಿಯಿಂದ ಖುತುಬಾ ಹಾಗೂ ಜಮಾಅತ್ ಪ್ರತಿನಿಧಿ ಸಂಗಮವು ಎಸ್ ವೈ ಎಸ್ ಝೋನ್ ಸಮಿತಿ ಅಧ್ಯಕ್ಷರಾದ ಅಬ್ದುರ್ರಝಾಖ್ ಲತೀಫಿ ಕುಂತೂರು ಇವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯ ಎಸ್ ಜೆ ಎಂ ಜಿಲ್ಲಾ ಮುಅಲ್ಲಿಂ ಸೆಂಟರ್  ಸಭಾಂಗಣದಲ್ಲಿ ಜರುಗಿತು. ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ನಾವೂರು ರವರು ಮುಖ್ಯ ಅತಿಥಿಯಾಗಿ ಮಾತನಾಡಿ, ಸಮಾಜದಲ್ಲಿಂದು ಮದುವೆಯ ಹೆಸರಲ್ಲಿ ಅನಗತ್ಯವಾಗಿ ನಡೆಯುತ್ತಿರುವ ದುಂದು ವೆಚ್ಚ ಹಾಗೂ ಅನಾಚಾರದಿಂದ  ದೂರವಿರುವಂತೆ ನಮ್ಮ ಯುವಕ ಯುವತಿಯರಿಗೆ ಜಮಾಅತ್  ನಾಯಕರು ಸ್ಪಷ್ಟ ಸಂದೇಶ ನೀಡಿ, ಸರಳ ಮಾದರಿ ಮದುವೆಗೆ ಪ್ರೇರಣೆ ನೀಡಬೇಕೆಂದು ಕರೆ ನೀಡಿದರು. ಕೆ.ಎಂ.ಜೆ ಜಿಲ್ಲಾಧ್ಯಕ್ಷರಾದ ಜಿ ಮುಹಮ್ಮದ್ ಕಾಮಿಲ್ ಸಖಾಫಿ ಯವರು ಕಾರ್ಯಕ್ರಮ ಉದ್ಘಾಟಿಸಿದರು. ಜಂ-ಇಯ್ಯತುಲ್ ಉಲಮಾ ಕೇಂದ್ರ ಸಮಿತಿ ನಾಯಕರಾದ ಆದಂ ಅಹ್ಸನಿ ಉಸ್ತಾದರು ದುಆ ನೆರವೇರಿಸಿದರು. ಪ್ರಸ್ತುತ ಸಭೆಯಲ್ಲಿ ಉಮರುಲ್ ಫಾರೂಕ್ ಸಖಾಫಿ ನೆಕ್ಕಿಲು, ಅತಾವುಲ್ಲ ಹಿಮಮಿ ಸಖಾಫಿ, ಹಮೀದ್ ಸಅದಿ ಕಳಂಜಿಬೈಲು, ಕಾಸಿಂ ಪದ್ಮುಂಜ, ಅಬ್ಬಾಸ್ ಬಟ್ಲಡ್ಕ, ಉಸ್ಮಾನ್ ಸೋಕಿಲ, ಅಬ್ದುಲ್ ಮಜೀದ್ ಸಖಾಫಿ, ಡಿ ಹೆಚ್ ಇಬ್ರಾಹಿಂ ಸಅದಿ, ಮುಹಮ್ಮದ್ ಅಲೀ ತುರ್ಕಳಿಕೆ, ಇಸ್ಹಾಕ್ ಹಾಜಿ ಮೇದರಬೆಟ್ಟು, ಅಬ್ದುಲ್ ಶುಕೂರ...

ಇಂದು ಕೊಳಕೆಯಲ್ಲಿ ಅಸ್ಸಯ್ಯಿದ್ ಚಟ್ಟೆಕ್ಕಲ್ ತಂಙಳ್ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ

ದೀವಾನ್ -ಇ-ಖಾಝಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸಯ್ಯಿದ್ ಮುಶ್ತಾಖುರ್ರಹ್ಮಾನ್ ಅಲ್ ಬುಖಾರಿ ಚಟ್ಟೆಕ್ಕಲ್ ತಂಙಳ್ ರವರಿಗೆ ಬಂಟ್ವಾಳ ತಾಲೂಕು ಸುನ್ನೀ ಸಂಘಟನೆಗಳ ಒಕ್ಕೂಟದ ವತಿಯಿಂದ ಡಿಸೆಂಬರ್ 05 ಶುಕ್ರವಾರ ಇಂದು ಸಂಜೆ 4 ಗಂಟೆಗೆ ಕೊಳಕೆ ಮಸ್ಜಿದ್ ವಠಾರ ತಾಜುಲ್ ಉಲಮಾ ವೇದಿಕೆಯಲ್ಲಿ ಗೌರವಾರ್ಪಣೆ ನಡೆಯಲಿದೆ. ಮದ್ಯಾಹ್ನ 3 ಗಂಟೆಗೆ ಅಮ್ಮೆಂಬಳ, ಜಾರದಗುಡ್ಡೆ ದರ್ಗಾ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಸಾದಾತ್ ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸ್ವಾಗತ ಸಮಿತಿ ಚಯರ್ಮೆನ್ ಆಶ್ರಫ್ ಸಖಾಫಿ ಆಲಡ್ಕ ಕರೆ ನೀಡಿದ್ದಾರೆ

SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್.ವಿ ಎ ಮುಹಮ್ಮದ್ ಸಖಾಫಿ ಕ್ವಿಝ್ ಸ್ಪರ್ಧೆಯಲ್ಲಿ ಪ್ರಥಮ.ಮಾದರೀಯೋಗ್ಯ ತರಗತಿ ನಡೆಸಿದ ಝೈನುದ್ದೀನ್ ಮದನಿ

ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ SJM ಉಳ್ಳಾಲ ರೇಂಜ್ ಆಶ್ರಯದಲ್ಲಿ ರೇಂಜ್ ಕಾಂಫರೆನ್ಸ್ ಉಳ್ಳಾಲ ಮುಕ್ಕಚೇರಿಯ ಅಲ್ ಮುಬಾರಕ್ ಮದ್ರಸ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಅಧ್ಯಕ್ಷತೆ ವಹಿಸಿದರು. ಮುಕ್ಕಚೇರಿ ಮದ್ರಸದ ಮುಖ್ಯೋಪಾಧ್ಯಾಯರಾದ ವಿ ಕೆ ಅಬ್ದುರ್ರಹ್ಮಾನ್ ಸಖಾಫಿ ದುಆ ನೆರವೇರಿಸಿದರು. ದಾರಂದಬಾಗಿಲು ಜುಮಾ ಮಸ್ಜಿದ್ ಖತೀಬರಾದ ಜಾಬಿರ್ ಫಾಳಿಲಿ ಖಿರಾಅತ್ ಪಠಿಸಿ, ಸಭೆಗೆ ಚಾಲನೆ ನೀಡಿದರು. ಮುಕ್ಕಚೇರಿ ಜುಮಾ ಮಸ್ಜಿದ್ ಖತೀಬರಾದ ಶರೀಫ್ ಬಾಖವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರೇಂಜ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ವರದಿ ಮಂಡಿಸಿದರು. ಕೋಶಾಧಿಕಾರಿ ವಿ ಎ ಮುಹಮ್ಮದ್ ಸಖಾಫಿ ಲೆಕ್ಕಪತ್ರ ಮಂಡಿಸಿದರು. ಮುಕ್ಕಚೇರಿ ಮಸೀದಿ, ಮದ್ರಸದ ಆಡಳಿತ ಸಮಿತಿಯ ಅಧ್ಯಕ್ಷರಾದ ಜಮಾಲಿಯ ಅಬ್ದುಲ್ ಖಾದರ್ ರವರ ಪುತ್ರ, ಸಮಿತಿ ಸದಸ್ಯರಾದ ಖಲೀಲ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಭೆಯ ಪ್ರಾರಂಭಕ್ಕೂ ಮುನ್ನ ಅಳೇಕಲ ನಜಾತುಸ್ಸಿಬಿಯಾನ್ ಮದ್ರಸದ ಮುಅಲ್ಲಿಂ ಝೈನುದ್ದೀನ್ ಮದನಿ ವಿದ್ಯಾರ್ಥಿಗಳಿಗೆ ಮಾದರೀ ಯೋಗ್ಯವಾದ ತರಗತಿ ನಡೆಸಿದರು. ತರಗತಿಯಲ್ಲಿ ಹಾಜರಿದ್ದ ಮುಅಲ್ಲಿಮರಿಂದ ವ್ಯಾಪಕ ಪ್ರಶಂಶೆಗೆ ಝೈನುದ್ದೀನ್ ಮದನಿ ಯವರ ತರಗತಿ ಪಾತ್ರವಾಯಿತು. ಅಳೇಕಲ ಮದ್ರಸದ ಮತ್ತೋರ್ವ ಮುಅಲ್ಲಿಮರಾದ ನಿಝಾಂ ಅಮಾನಿ ...

ಮಹಾ ಮಳೆ : 68 ಆಡು, ಕುರಿಗಳ ಸಾವು

ಉಳ್ಳಾಲ : ನಿನ್ನೆ ರಾತ್ರಿ ಸುರಿದ ಮಹಾಮಳೆಯಿಂದ ತಲಪಾಡಿ ಸಮೀಪದ ಕೆಸಿ ರೋಡ್ ಮಟನ್ ಯಾಕೂಬ್ ರವರ 68 ಆಡು, ಕುರಿಗಳು ಸಾವಿಗೀಡಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಆಡಿನ ಶೆಡ್ಡಿನೊಳಗೆ ನಿರಂತರ ಸುರಿದ ಮಳೆಯಿಂದ ನೆರೆ ನೀರು ನುಗ್ಗಿದ್ದು, ಆಡು, ಕುರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. 23 ಆಡು, ಕುರಿಗಳು ಪತ್ತೆಯಾಗಿದ್ದು, ಹೊಂಡ ತೆಗೆದು ಹೂಳಲಾಗಿದೆ.

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆ

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್  ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆಯು ಆಝಾದ್ ನಗರದ ಅನ್ವಾರುಲ್ ಉಲೂಂ ಮದ್ರಸ ಆಡಿಟೋರಿಯಂ ನಲ್ಲಿ ನಡೆಯಿತು. ಆಝಾದ್ ನಗರ ಮಸೀದಿಯ ಖತೀಬರಾದ ಅಬ್ದುಸ್ಸಮದ್ ಅಹ್ಸನಿ ದುಆ ನೆರವೇರಿಸಿದರು. ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ಸ್ವಾಗತಿಸಿದರು. ರೇಂಜ್ ಸಹಾಯಕ ಕಾರ್ಯದರ್ಶಿ ಇರ್ಫಾನ್ ಸಅದಿ ಅಳೇಕಲ ಖಿರಾಅತ್ ಪಠಿಸಿದರು.  ಎಸ್ ಜೆ ಎಂ ಉಳ್ಳಾಲ ರೇಂಜ್ ಹಾಗು ಉಳ್ಳಾಲ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನಲ್ ಟ್ರಸ್ಟ್ ಮುಫತ್ತಿಶರಾದ ಹುಸೈನ್ ಸಅದಿ ಹೊಸ್ಮಾರ್ ಸಭೆಯನ್ನು ಉದ್ಘಾಟಿಸಿ, ಮಾತನಾಡಿ ಮುಅಲ್ಲಿಮರ ಸೇವಾವಧಿಯು ಅತ್ಯಂತ ಅಮೂಲ್ಯವಾಗಿದ್ದು, ಸಂಪೂರ್ಣವಾಗಿ ಈ ಸಮಯವನ್ನು ನೂತನ ವಿಧಾನಗಳ ಮೂಲಕ ವಿದ್ಯಾರ್ಥಿಗಳ ಕಲಿಕಾಭಿವೃದ್ಧಿಗೆ ಮೀಸಲಿರಿಸಬೇಕು ಎಂದು ತಿಳಿಸಿದರು.  ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ ಲೆಕ್ಕಪತ್ರ ಮಂಡಿಸಿದರು. ನವಾಝ್ ಸಖಾಫಿ ಉಳ್ಳಾಲ ಪರೀಕ್ಷಾ ಹಾಗು ವೆಲ್ಫೇರ್ ವರದಿಯನ್ನು ಮಂಡಿಸಿದರು. ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಉಳ್ಳಾಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  2024-25 ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಗೆ ಪ್ರೋತ್...

ಮಂಗಳೂರು ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ಉನ್ನತ ಪೋಲೀಸ್ ಅಧಿಕಾರಿಗಳ ಭೇಟಿ

ಮಂಗಳೂರು ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ಉನ್ನತ ಪೋಲೀಸ್ ಅಧಿಕಾರಿಗಳ ಭೇಟಿ ಮಂಗಳೂರು : ಕರ್ನಾಟಕ ಉಲಮಾ ಕೋರ್ಡಿನೇಷನ್ ನಾಯಕತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ಮೈದಾನದಲ್ಲಿ ಇದೇ ಬರುವ ಎಪ್ರಿಲ್ 18 ಶುಕ್ರವಾರ ಅಪರಾಹ್ನ 3ಗಂಟೆಗೆ ನಡೆಯುವ ಐತಿಹಾಸಿಕ ವಕ್ಫ್ ಸಂರಕ್ಷಣಾ ಪ್ರತಿಭಟನಾ ಸ್ಥಳಕ್ಕೆ ವಿವಿಧ ಪೋಲೀಸ್ ಅಧಿಕಾರಿಗಳು , ಕಾನೂನು ಪಾಲಕರು ಭೇಟಿ ಮಾಡಿ ಸ್ಥಳ ಪರಿಶೀಲನೆ ಮತ್ತು ಮಾಹಿತಿ ಪಡೆದರು. ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ,ಡಿಸಿಪಿ ಸಿದ್ದಾರ್ಥ್ ಗೋಯಲ್ ,ಎಸಿಪಿ ದನ್ಯ ನಾಯಕ್, ಟ್ರಾಫಿಕ್ ಎಸಿಪಿ , ಡಿವೈಎಸ್ಪಿ ಸಹಿತ ಪೋಲೀಸ್ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸ

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಆಶ್ರಯದಲ್ಲಿ ಇದರ ಅಧೀನದ ಮದ್ರಸಗಳ ಪಬ್ಲಿಕ್ ಪರೀಕ್ಷೆಯು ನಡೆಯುತ್ತಿದೆ.  ಈ ಭಾಗವಾಗಿ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ಅಧೀನದ ರೇಂಜ್ ಅಂಗೀಕ್ರತ ಉಳ್ಳಾಲ ಅಳೇಕಲ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದಲ್ಲಿ ನಡೆಯುತ್ತಿರುವ ಪಬ್ಲಿಕ್ ಪರೀಕ್ಷೆಯ ನೋಟ

2024 ಪಬ್ಲಿಕ್ ಪರೀಕ್ಷೆಯಲ್ಲಿ ವಿಶೇಷ ಸಾಧನೆ

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ 2023-24 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಎಸ್ ಜೆ ಎಂ ಉಳ್ಳಾಲ ರೇಂಜ್ ಮಟ್ಟದಲ್ಲಿ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನ್ ಟ್ರಸ್ಟ್ ಅಧೀನದ ಅಳೇಕಲ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿನಿಗಳಾದ ಫಾತಿಮ ಸ್ವಫಾ ಝವಾತ್ ಮತ್ತು ಫಾತಿಮ ಕಶೀಫಃ ಪ್ರಥಮ ಹಾಗು ದ್ವಿತೀಯ ಸ್ಥಾನ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಇವರನ್ನು ಅಳೇಕಲ ಮದ್ರಸ ಅಧ್ಯಾಪಕರ ಒಕ್ಕೂಟ, ಎಸ್ ಬಿ ಎಸ್ ಅಳೇಕಲ ಶಾಖೆ ಮತ್ತು ಎಸ್ ಜೆ ಎಂ ಉಳ್ಳಾಲ ರೇಂಜ್ ಅಭಿನಂದಿಸಿದೆ. ಅಳೇಕಲ ಮದ್ರಸ ಆಡಳಿತ ಸಮಿತಿಯು ಮದ್ರಸ ವಿದ್ಯಾರ್ಥಿಗಳ ಮೀಲಾದುನ್ನಬಿ ಕಾರ್ಯಕ್ರಮದಲ್ಲಿ ಚಿನ್ನದ ಉಂಗುರವನ್ನು ನೀಡಿ ವಿಶೇಷ ಅಭಿನಂದನೆ ಸಲ್ಲಿಸಿದೆ.

ಎಸ್ ಜೆ ಎಂ ರಾಜ್ಯ ಮಟ್ಟದ ಪ್ರತಿಭಾ ಸಂಗಮ.ನಿಹಾನ್ ಮತ್ತು ಅಫ್ಫಾನ್ ಗೆ ಪ್ರಶಸ್ತಿ

ಉಳ್ಳಾಲ ಅಳೇಕಲ : ಇತ್ತೀಚೆಗೆ ಅಲ್ ಮದೀನಾ ಮಂಜನಾಡಿಯಲ್ಲಿ ಹಮ್ಮಿಕೊಂಡಿದ್ದ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್  ಎಸ್ ಜೆ ಎಂ ರಾಜ್ಯ ಮಟ್ಟದ ಪ್ರತಿಭಾ ಸಂಗಮದಲ್ಲಿ ಉಳ್ಳಾಲ ಅಳೇಕಲ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿಗಳಾದ ನಿಹಾನ್ ಅಬ್ದುಲ್ ರಹ್ಮಾನ್ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗು ಅಫ್ಫಾನ್ ಮುಹಮ್ಮದ್ ಇಸ್ಮಾಯಿಲ್ ಉರ್ದು ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರೇಂಜ್, ಜಿಲ್ಲಾ, ರಾಜ್ಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿ ಮದ್ರಸ, ನಾಡಿನ ಕೀರ್ತಿ ಹೆಚ್ಚಿಸಿದ ಇವರನ್ನು ಅಳೇಕಲ ಮದ್ರಸ ಅಧ್ಯಾಪಕರ ಒಕ್ಕೂಟ, ಮದ್ರಸ ಆಡಳಿತ ಸಮಿತಿ, ಎಸ್ ಬಿ ಎಸ್ ಅಳೇಕಲ ಶಾಖೆ, ಎಸ್ ಜೆ ಎಂ ಉಳ್ಳಾಲ ರೇಂಜ್ ಅಭಿನಂದಿಸಿದೆ. ಪ್ರಥಮ ಸ್ಥಾನಿಯಾದ ನಿಹಾನ್ ಎಂಬ ವಿದ್ಯಾರ್ಥಿ ಅಯಾಝ್ ಅಬ್ದುಲ್ ರಹ್ಮಾನ್ ಮತ್ತು ಆಯಿಷ ಬಾನು ಅಲ್ ಫಾತ್ವಿಮಿಯ್ಯಃ ದಂಪತಿಯ ಪುತ್ರ ಹಾಗು ದ್ವಿತೀಯ ಸ್ಥಾನ ಪಡೆದ ಅಫ್ಫಾನ್ ಎಂಬ ವಿದ್ಯಾರ್ಥಿ ಯು.ಡಿ ಅಬ್ದುಲ್ ಹಮೀದ್ ಅರಮೆಕ್ಸ್ ಮತ್ತು ಆಯಿಷ ದಂಪತಿಯ ಪುತ್ರನಾಗಿದ್ದಾನೆ.

ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಸಾಧನೆ

ಮದ್ರಸ ವಿದ್ಯಾರ್ಥಿನಿಗಳ ವಿಶೇಷ ಸಾಧನೆ ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ದೇಶ ವಿದೇಶಗಳಲ್ಲಿ ಏಕ ಕಾಲದಲ್ಲಿ ನಡೆಸಿದ ಸ್ಮಾರ್ಟ್ ಸ್ಕಾಲರ್ಶಿಪ್ ಮುಖ್ಯ ಪರೀಕ್ಷೆಯಲ್ಲಿ ಅಳೇಕಲದ ನಜಾತುಸ್ಸಿಬಿಯಾನ್ ಹೈಯರ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿನಿಗಳಾದ +1 ತರಗತಿಯ ಮರಿಯಂ ರುಫೈದಃ ಪ್ರಥಮ ಹಾಗು ಫಾತಿಮ ರಿಝಾ ದ್ವಿತೀಯ ರ್ಯಾಂಕ್ ಪಡೆದು ಬಂಗಾರದ ನಾಣ್ಯ ತಮ್ಮದಾಗಿಸಿ ಮದ್ರಸ, ಕುಟುಂಬ, ಊರಿಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿನಿಗಳಿಗೆ ಉಳ್ಳಾಲ ಮುಅಲ್ಲಿಮರ ಒಕ್ಕೂಟ ಎಸ್ ಜೆ ಎಂ, ಅಳೇಕಲ ಅಧ್ಯಾಪಕರು, ಎಸ್ ಬಿ ಎಸ್ ಅಳೇಕಲ ಅಭಿನಂದಿಸಿದೆ. ಮರಿಯಂ ರುಫೈದಃ ಹನೀಫ್ ಸಅದಿ ಅಲ್ ಅಫ್ಲಲಿ ಹಾಗು ಬುಶ್ರಾ ದಂಪತಿಯ ಪುತ್ರಿಯಾಗಿದ್ದು, ಫಾತಿಮ ರಿಝ ಯು.ಡಿ ಅಶ್ರಫ್ ಹಾಗು ರಶೀದಃ ದಂಪತಿಯ ಪುತ್ರಿಯಾಗಿದ್ದಾಳೆ.